ಪುಂಜಾಲಕಟ್ಟೆ: ಪುಂಜಾಲಕಟ್ಟೆ ಬಸವನಗುಡಿಯಲ್ಲಿ ಪಿವೈ ಟ್ರೇಡಿಂಗ್ ಟೈಲ್ಸ್,ಗ್ರಾನೈಟ್ ಹಾಗೂ ಸ್ಯಾನಿಟರಿ ಮಳಿಗೆಯ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಡಿ 28 ರಂದು ಉದ್ಘಾಟಿಸಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿದಾಗ ಸಂಸೆ ಬೆಳಗುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗವಹಿಸಿ ಶುಭ ಹಾರೈಸಿದರು. ಅತಿಥಿಗಳಾಗಿ ಮಡಂತ್ಯಾರು ಗ್ರಾ.ಪಂ ಅಧ್ಯಕ್ಷೆ ರೂಪ ಎಸ್,ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ವಿಜಯ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಅಜಿತ್ ಕುಮಾರ್ ಶೆಟ್ಟಿ ,ಮಡಂತ್ಯಾರು ವರ್ತಕರ ಸಂಘದ ಅಧ್ಯಕ್ಷ ಬಿ.ಜಯಂತ್ ಶೆಟ್ಟಿ, ಪುಂಜಾಲಕಟ್ಟೆ ಸೊಸೈಟಿ ಅಧ್ಯಕ್ಷ ತುಂಗಪ್ಪ ಬಂಗೇರ,ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸ,ಕಾವಳಮುಡೂರ್ ಸೊಸೈಟಿ ಅಧ್ಯಕ್ಷ ಪದ್ಮಶೇಖರ್ ಜೈನ್,ಮಡಂತ್ಯಾರು ಗ್ರಾ.ಪಂ ಉಪಾಧ್ಯಕ್ಷ ಗೋಪಾಲಕೃಷ್ಣ ಕುಕ್ಕಳ,ದ.ಕ ಜಿಲ್ಲಾ ಅಡಕೆ ಮತ್ತು ಕೃಷಿ ಉತ್ಪನ್ನಗಳ ವರ್ತಕರ ಸಂಘದ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಕಾರ್ಯಾಧ್ಯಕ್ಷ ಬಿ.ರಾಜಶೇಖರ್ ಶೆಟ್ಟಿ ಮಡಂತ್ಯಾರು, ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ದಿವಾಕರ್ ಶೆಟ್ಟಿ, ಕೆ.ಎಸ್.ಆರ್.ಟಿ.ಸಿ ನಿವೃತ್ತ ನೌಕರ ಜಯಪ್ರಕಾಶ್ ಭಟ್,ಕೃಷ್ಣ ಉಪಾಧ್ಯಯ,ಬಸವನಗುಡಿ ಪಂಚಕಟ್ಟೆ ಬಸವೇಶ್ವರ ದೇವಸ್ಥಾನದ ಅಧ್ಯಕ್ಷ ಪ್ರಶಾಂತ್,ಬಿಲ್ಡಿಂಗ್ ಗುತ್ತಿಗೆದಾರ ಮೋಹನ್ ಶೆಟ್ಟಿ ನರ್ವಲದಡ್ಡ,ಸಂಸ್ಥೆಯ ಮಾಲಕರ ಮಾತ-ಪಿತರಾದ ಶ್ರೀಮತಿ ಬೇಬಿ- ತಿಮ್ಮಪ್ಪ ಶೆಟ್ಟಿ ಪಾತಿಲ
ನಂದಪ್ಪ ಚೌಟ-ಲೀಲಾ ಉರುವಾಲು,ಪದ್ಮಪ್ರಸಾದ್ ಚೌಟ,ಪ್ರವೀಣ್ ಶೆಟ್ಟಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದು ಶುಭಕೋರಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕರಾದ ಶ್ರೀಮತಿ ಸುಮಲತಾ- ಚೇತನ ಶೆಟ್ಟಿ,ಪೂರ್ವಿ ಶೆಟ್ಟಿ,ಯುವನ್ ಶೆಟ್ಟಿ ಸ್ವಾಗತಿಸಿ ಸತ್ಕರಿಸಿದರು. ಹರ್ಷ ನಾರಾಯಣ್ ಶೆಟ್ಟಿ ನೆತ್ತರ ನಿರೂಪಿಸಿದರು.











