25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿ

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ರಿ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಇವರ ಜಂಟಿ ಆಶ್ರಯದಲ್ಲಿ ಸ್ವಜಾತಿ ಭಾಂದವರ ಸಿಂಧೂರ ಟ್ರೋಫಿ ಇದರ ಉದ್ಘಾಟನೆಯನ್ನು ನಡುಬೊಟ್ಟು ಇದರ ಧರ್ಮದರ್ಶಿ ಶ್ರೀ ಎನ್ ರವಿ ಇವರು ಡಿ. 28ರಂದು ನೆರವೇರಿಸಿದರು.

ಅಧ್ಯಕ್ಷತೆಯನ್ನು ತಾಲೂಕು ಸಂಘದ ಉಪಾಧ್ಯಕ್ಷರಾದ ಶ್ರೀ ಪದ್ಮ ಕುಮಾರ್ ವಹಿಸಿದರು. ಮುಖ್ಯ ಅತಿಥಿಗಳಾಗಿ ನವಶಕ್ತಿ ಶಶಿಧರ್ ಶೆಟ್ಟಿ ಬರೋಡರವರು ಕುಲಾಲ ಸಮುದಾಯ ಎಲ್ಲರಿಗೂ ಎಲ್ಲಾ ಸಂದರ್ಭದಲ್ಲಿ ಅವಶ್ಯಕತೆ ಇರುವ ಸಮುದಾಯ ಅಂತ ಹೇಳುತ್ತಾ ಭವನ ನಿರ್ಮಾಣಕ್ಕೆ ರೂ. 2.00 ಲಕ್ಷ ನೀಡುವುದಾಗಿ ಹೇಳಿದರು. ವೇದಿಕೆಯಲ್ಲಿ ಸಂಘದ ಗೌರವ ಅಧ್ಯಕ್ಷರಾದ ಶ್ರೀ ಹರೀಶ್ ಕಾರಿಂಜ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತೀ ಶೆಟ್ಟಿ, ವಿಜಯ ಕೋ ಆಪರೇಟಿವ್ ಸೊಸೈಟಿನ ಅಧ್ಯಕ್ಷರಾದ ಅಜಿತ್ ಕೊರ್ಯಾರು, ರಾಜೇಶ್ ಶೆಟ್ಟಿ ನವಶಕ್ತಿ, ಯುವ ವೇದಿಕೆ ಅಧ್ಯಕ್ಷರಾದ ಅವಿನಾಶ್ ಮಾಣೂರು, ಲೋಕೇಶ್ ಕುಲಾಲ್, ಉಮೇಶ್ ಕುಲಾಲ್, ಹೊನ್ನಪ್ಪ ಮೂಲ್ಯ ಮಾಣೂರು, ಯತೀಶ್ ಸಿರಿಮಜಲ್, ಮೋಹನ್ ಕಂಚಿಂಜ ಯುವ ವೇದಿಕೆಯ ಕಾರ್ಯದರ್ಶಿ ತಿಲಕ್ ರಾಜ್ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಸೌರಮಾನ ಯುಗಾದಿ ಪ್ರಯುಕ್ತನಾಳ ಶ್ರೀ ದುರ್ಗಾ ಟ್ರೋಫಿ -2024

Suddi Udaya

ರೋಟರಿ ಕ್ಲಬ್ ವಲಯ ಮಟ್ಟದ ಕ್ರಿಕೆಟ್ ಸ್ಪರ್ಧೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya
error: Content is protected !!