September 6, 2026
ಅಪರಾಧ ಸುದ್ದಿ

ಅಂಡಿಂಜೆ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ಸ್ಕಿಡ್ ಆಗಿ ಮಗುಚಿ ಬಿದ್ದ ದ್ವಿಚಕ್ರ ವಾಹನ : ಸವಾರ ಕೊಕ್ರಾಡಿ ಗ್ರಾಮದ ಸುಂದರ ಶೆಟ್ಟಿ ಮೃತ್ಯು

ಅಂಡಿಂಜೆ: ಅಂಡಿಂಜೆ ಗ್ರಾಮದ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ದ್ವಿಚಕ್ರ ಸ್ಕಿಡ್ ಆಗಿ ಮಗುಚಿ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಡಿ.28 ರಂದು ವರದಿಯಾಗಿದೆ.

ಕೊಕ್ರಾಡಿ ಗ್ರಾಮದಆದರ್ಶ ನಗರ ನಿವಾಸಿ ಸುಂದರ ಶೆಟ್ಟಿ, (66 ವರ್ಷ) ಈ ದುಘ೯ಟನೆಯಲ್ಲಿ ಮೃತಪಟ್ಟವರು.

ಘಟನೆ ಹಿನ್ನೆಲೆ:
ಡಿ. 28ರಂದು ಸಂಜೆ ಸುಮಾರು 5:45ಕ್ಕೆ ಅಂಡಿಂಜೆ ಗ್ರಾಮದ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ವೇಣೂರು- ನಾರಾವಿ ಸಾರ್ವಜನಿಕ ಡಾಮಾರು ರಸ್ತೆಯ ಸ್ವಲ್ಪ ಇಳಿಜಾರು ರಸ್ತೆಯಲ್ಲಿ ದ್ವಿಚಕ್ರ ವಾಹನವನ್ನು ಅದರ ಸವಾರ ಸುಂದರ ಶೆಟ್ಟಿ ಎಂಬವರು ವೇಣೂರು ಕಡೆಯಿಂದ ನಾರಾವಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿದ ಪರಿಣಾಮ ಚಾಲಕನ ಹತೋಟಿ ತಪ್ಪಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಸವಾರ ಸುಂದರ ಶೆಟ್ಟಿ ವಾಹನದೊಂದಿಗೆ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ರೋಶನ್ ಮತ್ತಿತರರು ಸೇರಿ ಚಿಕಿತ್ಸೆಯ ಬಗ್ಗೆ ಮೂಡಬಿದ್ರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅವರು ದಾರಿ ಮಧ್ಯೆ ಮೃತ ಪಟ್ಟರೆನ್ನಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ-ಮುಂಡ್ರುಪಾಡಿ
ಭೀಕರ ರಸ್ತೆ ಅಪಘಾತ
ಗುರುವಾಯನಕೆರೆಯ ನಿವಾಸಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ | ಬೆಳ್ತಂಗಡಯ ಇಬ್ಬರು ಮಂಗಳೂರು ಸಿಸಿಬಿ ಬಲೆಗೆ ರೂ. 3.2 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ

Suddi Udaya
error: Content is protected !!