July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

ಗುರುವಾಯನಕೆರೆ: ಪದವಿ ಪೂರ್ವ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಬಳಿಯಲ್ಲಿ ನೂತನವಾಗಿರೂ. 15 ಲಕ್ಷ ಲೀಟರ್ ಸಾಮರ್ಥ್ಯದ ಕೊಳಚೆ ನೀರಿ ಸಂಸ್ಕರಣಾ ಘಟಕ( ಎಸ್ ಟಿ ಪಿ) ರಚನೆಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.

ಎಕ್ಸೆಲ್ ನ ಹಲವು ವಿದ್ಯಾರ್ಥಿಗಳು ರಾಷ್ಟ್ರದ ಅತ್ಯುನ್ನತ ಮಟ್ಟದ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ ಏಮ್ಸ್, ಜಿಪ್ಮಾರ್ ಹಾಗೂ ಅತ್ಯುನ್ನತ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಐಟಿ, ಎನ್ ಐಐಟಿ ಗಳಂಥ ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆದ ಕಾರಣ ಸಹಜವಾಗಿ ರಾಷ್ಟ್ರಮಟ್ಟದಲ್ಲಿ ಸಾವಿರಾರು ವಿದ್ಯಾರ್ಥಿಗಳು ಎಕ್ಸೆಲ್ ನಲ್ಲಿ ಪಿಯುಸಿ ಶಿಕ್ಷಣ ಪಡೆಯಲು ಹಾತೊರೆಯುತ್ತಿದ್ದಾರೆ.

ಗುಣ ಮಟ್ಟದ ಶಿಕ್ಷಣ, ಆಧುನಿಕ ವ್ಯವಸ್ಥೆಗಳಿರುವ ವಸತಿ ವ್ಯವಸ್ಥೆ, ಪೌಷ್ಟಿಕಾಂಶವುಳ್ಳ ಊಟೋಪಚಾರ, ಶಿಸ್ತು – ಸಭ್ಯ – ಸಂಸ್ಕಾರಗಳಿರುವ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನೂತನ ಎಸ್ ಟಿ ಪಿ ಘಟಕವನ್ನು ಶೀಘ್ರದಲ್ಲಿ ಕಾಮಗಾರಿ ಮುಗಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ತಿಳಿಸಿದ್ದಾರೆ.

Related posts

ಇಳಂತಿಲ : ಅಣಬೆ ಕೃಷಿ ತರಬೇತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya
error: Content is protected !!