23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬುರುಡೆ ಪ್ರಕರಣ ವರದಿಯ ಆದೇಶ ಮತ್ತೆ ಜ.3ಕ್ಕೆ ಮುಂದೂಡಿದ ಕೋರ್ಟ್

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ವರದಿಯನ್ನು ಸಲ್ಲಿಸಿದ ಆದೇಶವನ್ನು ಡಿ.26 ಕ್ಕೆ ನಿಗದಿಪಡಿಸಲಾಗಿತ್ತು. ಆದ್ರೆ ಆದೇಶವನ್ನು ಡಿ.29 ಕ್ಕೆ ಮುಂದೂಡಿತ್ತು ಇದೀಗ ಮತ್ತೆ ಆದೇಶವನ್ನು ಜ.3 ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20 ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು (u/s)215 ಅಡಿಯಲ್ಲಿ ಚಿನ್ನಯ್ಯ , ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತ ಭಟ್ ವಿರುದ್ಧ ದೂರು ಸಲ್ಲಿಸಿದ್ದರು.

ಈ ವರದಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಹೆಚ್.ಟಿ ಅವರು ವಿಚಾರಣೆ ನಡೆಸಿ ಡಿ.26 ರಂದು ಆದೇಶದಿಂದ ಡಿ.29 ಕ್ಕೆ ಮುಂದೂಡಿತ್ತು. ಮತ್ತೆ ಇದೀಗ ಜ.3 ಕ್ಕೆ ಆದೇಶವನ್ನು ಮುಂದೂಡಿದೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಲೋಕೇಶ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

Related posts

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ವೇಣೂರು -ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!