25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ಮನೆಗೆ ವಾಪಾಸು ಹಿಂದಿರುಗದೆ ಕಾಣೆಯಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ಪುರುಷರಬೆಟ್ಟು ಎಂಬಲ್ಲಿ ಡಿ.27 ರಂದು ನಡೆದಿದೆ.

ಕಾಣೆಯಾದ ವ್ಯಕ್ತಿ ಜಿನ್ನಪ್ಪ ಗೌಡರ ಹಿರಿಯ ಪುತ್ರ ರಾಜೇಶ್ ಪಿ. (30ವ) ಅವರು ಒಂದು ವರ್ಷದ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು, ಬಳಿಕ ವಾಪಾಸು ಊರಿಗೆ ಬಂದು ಕೆಲಸವಿಲ್ಲದೆ ತಂದೆ-ತಾಯಿಯ ಜೊತೆಗೆ ಮನೆಯಲ್ಲಿ ವಾಸವಿದ್ದರು, ಡಿ. 27 ರಂದು ಅವರ ತಮ್ಮ ಪ್ರಶಾಂತ್ ಪಿ ಅವರು ರಜೆಯ ಕಾರಣ ಮನೆಗೆ ಬಂದಾಗ ಅಣ್ಣ ರಾಜೇಶ್ ಕಾಣದಿರುವುದನ್ನು ತಾಯಿಯಲ್ಲಿ ವಿಚಾರಿಸಿದಾಗ ಅವನು ಬೆಳಿಗ್ಗೆ 10:00 ಗಂಟೆಗೆ ಮನೆಯಿಂದ ಹೊರಗೆ ಹೋದವನು ವಾಪಾಸು ಬಂದಿರುವುದಿಲ್ಲವಾಗಿ ತಿಳಿಸಿದರು. ಅವರ ಮೊಬೈಲ್‌ಗೆ ಕರೆ ಮಾಡಿದರೆ ಕರೆಯನ್ನು ಸ್ವೀಕರಿಸುತ್ತಿರಲಿಲ್ಲ, ನೆರೆ ಮನೆ, ಸಂಬಂಧಿಕರಿಗೆ ವಿಚಾರ ತಿಳಿಸಿ ಮನೆಯ ವಠಾರದಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ, ರಾತ್ರಿ ಸಮಯ ಮನೆಗೆ ಬರಬಹುದೆಂದು ಕಾದು ನೋಡಿದರೂ ಈವರೆಗೆ ವಾಪಾಸು ಮನೆಗೆ ಬಾರದೇ ಇರುವುದರ ಕುರಿತು ಅವರನ್ನು ಪತ್ತೆ ಹಚ್ಚಿಕೊಡಬೇಕು ಎಂದು ತಮ್ಮ ಪ್ರಶಾಂತ್ ಪಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.

ಸಾಧರಣ ಶರೀರ, 5.6 ಅಡಿ ಎತ್ತರ, ಕಪ್ಪು ಬಣ್ಣದ ಉದ್ದ ತೋಳಿನ ಶರ್ಟ್ ಹಾಗೂ ಬರ್ಮುಡ ಧರಿಸಿದ್ದು ತುಳು, ಕನ್ನಡ, ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ.೮೨/೨೫ ಕಲಂ ಅಡಿ ಮನುಷ್ಯ ಕಾಣೆಯಾಂತೆ ದೂರು ದಾಖಲಾಗಿದೆ.

Related posts

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಪ್ರದೀಪ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya
error: Content is protected !!