22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ಮನೆಗೆ ವಾಪಾಸು ಹಿಂದಿರುಗದೆ ಕಾಣೆಯಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ಪುರುಷರಬೆಟ್ಟು ಎಂಬಲ್ಲಿ ಡಿ.27 ರಂದು ನಡೆದಿದೆ.

ಕಾಣೆಯಾದ ವ್ಯಕ್ತಿ ಜಿನ್ನಪ್ಪ ಗೌಡರ ಹಿರಿಯ ಪುತ್ರ ರಾಜೇಶ್ ಪಿ. (30ವ) ಅವರು ಒಂದು ವರ್ಷದ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು, ಬಳಿಕ ವಾಪಾಸು ಊರಿಗೆ ಬಂದು ಕೆಲಸವಿಲ್ಲದೆ ತಂದೆ-ತಾಯಿಯ ಜೊತೆಗೆ ಮನೆಯಲ್ಲಿ ವಾಸವಿದ್ದರು, ಡಿ. 27 ರಂದು ಅವರ ತಮ್ಮ ಪ್ರಶಾಂತ್ ಪಿ ಅವರು ರಜೆಯ ಕಾರಣ ಮನೆಗೆ ಬಂದಾಗ ಅಣ್ಣ ರಾಜೇಶ್ ಕಾಣದಿರುವುದನ್ನು ತಾಯಿಯಲ್ಲಿ ವಿಚಾರಿಸಿದಾಗ ಅವನು ಬೆಳಿಗ್ಗೆ 10:00 ಗಂಟೆಗೆ ಮನೆಯಿಂದ ಹೊರಗೆ ಹೋದವನು ವಾಪಾಸು ಬಂದಿರುವುದಿಲ್ಲವಾಗಿ ತಿಳಿಸಿದರು. ಅವರ ಮೊಬೈಲ್‌ಗೆ ಕರೆ ಮಾಡಿದರೆ ಕರೆಯನ್ನು ಸ್ವೀಕರಿಸುತ್ತಿರಲಿಲ್ಲ, ನೆರೆ ಮನೆ, ಸಂಬಂಧಿಕರಿಗೆ ವಿಚಾರ ತಿಳಿಸಿ ಮನೆಯ ವಠಾರದಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ, ರಾತ್ರಿ ಸಮಯ ಮನೆಗೆ ಬರಬಹುದೆಂದು ಕಾದು ನೋಡಿದರೂ ಈವರೆಗೆ ವಾಪಾಸು ಮನೆಗೆ ಬಾರದೇ ಇರುವುದರ ಕುರಿತು ಅವರನ್ನು ಪತ್ತೆ ಹಚ್ಚಿಕೊಡಬೇಕು ಎಂದು ತಮ್ಮ ಪ್ರಶಾಂತ್ ಪಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.

ಸಾಧರಣ ಶರೀರ, 5.6 ಅಡಿ ಎತ್ತರ, ಕಪ್ಪು ಬಣ್ಣದ ಉದ್ದ ತೋಳಿನ ಶರ್ಟ್ ಹಾಗೂ ಬರ್ಮುಡ ಧರಿಸಿದ್ದು ತುಳು, ಕನ್ನಡ, ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ.೮೨/೨೫ ಕಲಂ ಅಡಿ ಮನುಷ್ಯ ಕಾಣೆಯಾಂತೆ ದೂರು ದಾಖಲಾಗಿದೆ.

Related posts

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ನಿಧನ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya
error: Content is protected !!