25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ ಆಶ್ರಯದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಅರಸಿನಮಕ್ಕಿ ಹತ್ಯಡ್ಕ ಸಹಕಾರಿ ಸಂಘದ ಕಟ್ಟಡದಲ್ಲಿ ಡಿ.29ರಂದು ಉದ್ಘಾಟನೆಗೊಂಡಿತು.

ಕೇಂದ್ರದ ಅತೀ ಸಣ್ಣ ಮಧ್ಯಮ ಕೈಗಾರಿಕಾ ಮತ್ತು ಉದ್ಯೋಗ ಖಾತೆಗಳ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜು ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್, ಅಗ್ರಿಲೀಫ್ ಸಂಸ್ಥೆಯ ಅವಿನಾಶ್ ರಾವ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಜನೌಷಧಿ ಕೇಂದ್ರದ ಮಾಲಕ ಶಿವರಂಜನ್, ನಿರ್ದೇಶಕರು, ಸಿಬ್ಬಂದಿ ವರ್ಗದವರು, ಸದಸ್ಯರು ಉಪಸ್ಥಿತರಿದ್ದರು.

ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ವೃಶಾಂಕ್ ಖಾಡಿಲ್ಕರ್ ನಿರೂಪಿಸಿದರು.

Related posts

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya
error: Content is protected !!