September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ ಆಶ್ರಯದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಅರಸಿನಮಕ್ಕಿ ಹತ್ಯಡ್ಕ ಸಹಕಾರಿ ಸಂಘದ ಕಟ್ಟಡದಲ್ಲಿ ಡಿ.29ರಂದು ಉದ್ಘಾಟನೆಗೊಂಡಿತು.

ಕೇಂದ್ರದ ಅತೀ ಸಣ್ಣ ಮಧ್ಯಮ ಕೈಗಾರಿಕಾ ಮತ್ತು ಉದ್ಯೋಗ ಖಾತೆಗಳ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜು ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ. ರವಿಚಂದ್ರ ರಾವ್, ಅಗ್ರಿಲೀಫ್ ಸಂಸ್ಥೆಯ ಅವಿನಾಶ್ ರಾವ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಜನೌಷಧಿ ಕೇಂದ್ರದ ಮಾಲಕ ಶಿವರಂಜನ್, ನಿರ್ದೇಶಕರು, ಸಿಬ್ಬಂದಿ ವರ್ಗದವರು, ಸದಸ್ಯರು ಉಪಸ್ಥಿತರಿದ್ದರು.

ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ವೃಶಾಂಕ್ ಖಾಡಿಲ್ಕರ್ ನಿರೂಪಿಸಿದರು.

Related posts

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya

ಲೆಟ್ಸ್ ಥ್ಯಾಂಕ್ ಫೌಂಡೇಶನ್ ವತಿಯಿಂದ ಕಕ್ಕಿಂಜೆಯ ವಿಶೇಷ ಚೇತನ ಮೊಹಮ್ಮದ್ ಕುಂಞಿ ರವರಿಗೆ ಗೂಡಂಗಡಿಯ ಸಹಕಾರ

Suddi Udaya

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಉಜಿರೆಯಲ್ಲಿ ‘ಗುರುಪೂರ್ಣಿಮೆ ಮಹೋತ್ಸವ’

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!