23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಸಂಸ್ಥಾಪಕ ಶ್ರೀ ಕೀರ್ತಿ ಶೇಷ ವಸಂತ ಬಂಗೇರರವರ 80ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗುರು ವಸಂತ ಎಂಬ ಹೆಸರಲ್ಲಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಇದರ ಅಧ್ಯಕ್ಷೆ ಶ್ರೀಮತಿ ಪ್ರೀತಿತಾ ಧರ್ಮವಿಜೇತ್ ವಹಿಸಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ತಮ್ಮ ತಂದೆಯವರ 80ನೇ ಹುಟ್ಟುವ ಹಬ್ಬದ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದೇವೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಸೂಕ್ತ ವೇದಿಕೆಯನ್ನು ನಿರ್ಮಾಣ ಮಾಡಿಕೊಟ್ಟಿದ್ದೇವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಮತ್ತು ತಮ್ಮ ತಂದೆಯವರಾದ ಕೆ ವಸಂತ ಬಂಗೇರರ ರವರು ಶ್ರೀ ಗುರುದೇವ ಕಾಲೇಜಿನ, ಜಿಲ್ಲೆಯ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗಾಗಿ ಮತ್ತು ಯಾರು ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಕಾಲೇಜನ್ನು ಕಟ್ಟಿ ಬೆಳೆಸಿದ್ದಾರೆ, ಅವರು ಒಳ್ಳೆಯ ಉದ್ದೇಶದಿಂದ ಸ್ಥಾಪಿಸಿದ ಕಾಲೇಜು ಹೆಮ್ಮರವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ತಾಲೂಕಿನ ಸುಮಾರು 24 ಪ್ರೌಢಶಾಲೆಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಬದಲಾಜೆ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಎಕ್ಸೆಲ್ ಟೆಕ್ನೋ ಪ್ರೌಢಶಾಲೆ ವೇಣೂರು ಇಲ್ಲಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದರು. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು ಮತ್ತು ಭಾಗವಹಿಸಿದ ಎಲ್ಲಾ ಪ್ರೌಢಶಾಲೆಗಳಿಗೆ ಸ್ಮರಣಿಕೆಯನ್ನ ನೀಡಿ ಅಭಿನಂದಿಸಲಾಯಿತು, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಬಿಎ ಶಮಿಉಲ್ಲ, ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾಲೇಜಿನ ಲೆಕ್ಕಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಸುಷ್ಮಾ ವಿಜೇತರ ಪಟ್ಟಿಯನ್ನು ವಾಚಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್ ವಂದಿಸಿದರು. ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ರಾಕೇಶ್ ಕುಮಾರ್ ಇತಿಹಾಸ ಉಪನ್ಯಾಸಕರಾದ ಹರೀಶ್ ಪೂಜಾರಿ ಮತ್ತು ರಾಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸೌಜನ್ಯ ಕಾರ್ಯಕ್ರಮ ನಿರೂಪಿಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಾದ ಮತ್ತು ಭಾಗವಹಿಸಿದ ಎಲ್ಲ ಸ್ಪರ್ಧಾರ್ಥಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು. ಗಣಿತಶಾಸ್ತ್ರ ಭಾಗದ ಉಪನ್ಯಾಸಕಿ ಶ್ರೀಮತಿ ಮಾಯಾ ಭಟ್ ಧನ್ಯವಾದ ನೀಡಿದರು.

Related posts

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

Suddi Udaya

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya
error: Content is protected !!