September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

ಬೆಳ್ತಂಗಡಿ : ಒಂದು ಕಡೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಕಾನೂನಿನ ಹೆಸರಿನಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿದ್ದರೆ, ಇನ್ನೊಂದೆಡೆ ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದೆ. ಈ ಎರಡೂ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಹಿಂದೂ ಜನಜಾಗೃತಿ ಸಮಿತಿಯು, ಹಿಂದೂ ಸಮಾಜದ ರಕ್ಷಣೆಗಾಗಿ ರಾಜ್ಯದ ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರಗಳು ತಕ್ಷಣವೇ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದೆ.

ಅಸಂವಿಧಾನಿಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ ಕಾಯ್ದೆಗೆ ಅನುಮತಿ ನೀಡಬಾರದು ಹಾಗೂ ಬಾಂಗ್ಲಾ ಹಿಂದೂ ಅಲ್ಪ ಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲಿಸಲು ಭಾರತ ಸರಕಾರದಿಂದ ಕಠಿಣ ರಾಜಕೀಯ ಹಸ್ತಕ್ಷೇಪ ಹಾಗೂ ಅಂತಾರಾಷ್ಟ್ರೀಯ ಒತ್ತಡ ಹೇರುವಂತೆ ಆಗ್ರಹಿಸಿ ಬೆಳ್ತಂಗಡಿ ತಹಶೀಲ್ದಾರಾದ ಪೃಥ್ವಿ ಸಾನಿಕಂ ಇವರ ಮೂಲಕ ರಾಜ್ಯಪಾಲರಿಗೆ ಮತ್ತು ಪ್ರಧಾನಿಯವರಿಗೆ ಮನವಿಯನ್ನು ನೀಡಲಾಯಿತು.


ಹಿಂದೂ ಸಮಾಜದ ಅಸ್ತಿತ್ವಕ್ಕೆ ಧಕ್ಕೆ ತರುತ್ತಿರುವ ವಿಚಾರಗಳಲ್ಲಿ ಸರ್ಕಾರಗಳು ವಿಫಲವಾದರೆ ಹಿಂದೂ ಸಮಾಜವು ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯು ಎಚ್ಚರಿಸಿದೆ.

ಈ ಸಂದರ್ಭದಲ್ಲಿ ಧರ್ಮ ಪ್ರೇಮಿಗಳಾದ ಯಶವಂತ ಗೌಡ ಪಂಚಾಯತಿ ಅಧ್ಯಕ್ಷರು ಕೊಯ್ಯೂರು, ಉಮಾ ರಾವ್ ಮಹಿಳಾ ಒಕ್ಕೂಟ ಅಧ್ಯಕ್ಷರು ಬೆಳ್ತಂಗಡಿ, ಕೇಶವ ಅಚ್ಚಿನಡ್ಕ, ರಾಜೇಂದ್ರ ಜಿ ಕಾನರ್ಪ, ಮೋಹನ್ ಬೈರಾ ಪುತ್ರಬೈಲು, ವಸಂತ ಕಲ್ಲಾಜೆ, ಶಾಂತ ಉಜಿರೆ, ಸಂತೋಷ್ ಪನೇಜಾಲ್, ವಿನೋದ ಉಜಿರೆ, ವಸಂತ ಗುರುವಾಯನಕೆರೆ, ಶಾರದಾ ಭಂಡಾರಕರ್, ಯೋಗೀಶ್ ಕೆಂಬರ್ಜೆ, ಯಂ ಹರೀಶ್ ಜಿ ಮುದ್ದಿನಡ್ಕ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya

ನಾವೂರು ನವೋದಯ ಯುವಕ ಮಂಡಲ ವತಿಯಿಂದ “ಆಟಿ ಸುಗಿಪು”; ಸಾಂಪ್ರದಾಯಿಕ ಆಟಿ ಕಷಾಯ ಹಾಗೂ ತಜೆಂಕ್ ದೋಸೆ ವಿತರಣೆ

Suddi Udaya

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

Suddi Udaya
error: Content is protected !!