July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

ಬೆಳ್ತಂಗಡಿ : ಒಂದು ಕಡೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಕಾನೂನಿನ ಹೆಸರಿನಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿದ್ದರೆ, ಇನ್ನೊಂದೆಡೆ ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದೆ. ಈ ಎರಡೂ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಹಿಂದೂ ಜನಜಾಗೃತಿ ಸಮಿತಿಯು, ಹಿಂದೂ ಸಮಾಜದ ರಕ್ಷಣೆಗಾಗಿ ರಾಜ್ಯದ ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರಗಳು ತಕ್ಷಣವೇ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದೆ.

ಅಸಂವಿಧಾನಿಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ ಕಾಯ್ದೆಗೆ ಅನುಮತಿ ನೀಡಬಾರದು ಹಾಗೂ ಬಾಂಗ್ಲಾ ಹಿಂದೂ ಅಲ್ಪ ಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲಿಸಲು ಭಾರತ ಸರಕಾರದಿಂದ ಕಠಿಣ ರಾಜಕೀಯ ಹಸ್ತಕ್ಷೇಪ ಹಾಗೂ ಅಂತಾರಾಷ್ಟ್ರೀಯ ಒತ್ತಡ ಹೇರುವಂತೆ ಆಗ್ರಹಿಸಿ ಬೆಳ್ತಂಗಡಿ ತಹಶೀಲ್ದಾರಾದ ಪೃಥ್ವಿ ಸಾನಿಕಂ ಇವರ ಮೂಲಕ ರಾಜ್ಯಪಾಲರಿಗೆ ಮತ್ತು ಪ್ರಧಾನಿಯವರಿಗೆ ಮನವಿಯನ್ನು ನೀಡಲಾಯಿತು.


ಹಿಂದೂ ಸಮಾಜದ ಅಸ್ತಿತ್ವಕ್ಕೆ ಧಕ್ಕೆ ತರುತ್ತಿರುವ ವಿಚಾರಗಳಲ್ಲಿ ಸರ್ಕಾರಗಳು ವಿಫಲವಾದರೆ ಹಿಂದೂ ಸಮಾಜವು ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯು ಎಚ್ಚರಿಸಿದೆ.

ಈ ಸಂದರ್ಭದಲ್ಲಿ ಧರ್ಮ ಪ್ರೇಮಿಗಳಾದ ಯಶವಂತ ಗೌಡ ಪಂಚಾಯತಿ ಅಧ್ಯಕ್ಷರು ಕೊಯ್ಯೂರು, ಉಮಾ ರಾವ್ ಮಹಿಳಾ ಒಕ್ಕೂಟ ಅಧ್ಯಕ್ಷರು ಬೆಳ್ತಂಗಡಿ, ಕೇಶವ ಅಚ್ಚಿನಡ್ಕ, ರಾಜೇಂದ್ರ ಜಿ ಕಾನರ್ಪ, ಮೋಹನ್ ಬೈರಾ ಪುತ್ರಬೈಲು, ವಸಂತ ಕಲ್ಲಾಜೆ, ಶಾಂತ ಉಜಿರೆ, ಸಂತೋಷ್ ಪನೇಜಾಲ್, ವಿನೋದ ಉಜಿರೆ, ವಸಂತ ಗುರುವಾಯನಕೆರೆ, ಶಾರದಾ ಭಂಡಾರಕರ್, ಯೋಗೀಶ್ ಕೆಂಬರ್ಜೆ, ಯಂ ಹರೀಶ್ ಜಿ ಮುದ್ದಿನಡ್ಕ ಮುಂತಾದವರು ಉಪಸ್ಥಿತರಿದ್ದರು.

Related posts

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ಟಿಪ್ಪ‌ರ್ ಲಾರಿ ಡಿಕ್ಕಿ: ದ್ವಿಚಕ್ರ ಸವಾರ ಮೃತ್ಯು

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya
error: Content is protected !!