September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

ಬೆಳ್ತಂಗಡಿ : ಪರಿಸರ ಮಾಲಿನ್ಯದಿಂದ ಸಮಸ್ಯೆಯಾಗಿದೆ ಎಂದು ಆರೋಪಿಸಿ, ಸಲ್ಲಿಕೆಯಾಗಿರುವ ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟು ನಡ ಮಲೆಯಡ್ಕ ಸಮೀಪದಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಗ್ರೋಡಿ ಹಾಟ್‌ಮಿಕ್ಸ್ ಘಟಕ, ಸರಕಾರದ ಮುಖ್ಯ ಕಾರ್ಯದರ್ಶಿ, ತಹಶೀಲ್ದಾರ್, ಜಿಲ್ಲಾಧಿಕಾರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನಡ ಗ್ರಾ.ಪಂ ಪಿಡಿಒ ಅವರಿಗೆ ನೋಟೀಸು ಜಾರಿ ಮಾಡಿದೆ.


2008 ರಿಂದ ಉಜಿರೆ- ಪಡ್ವೆಟ್ಟು-ಸುರ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಮಿಕ್ಸಿಂಗ್ ಘಟಕದಿಂದ ಪರಿಸರ ಮಾಲಿನ್ಯ ಉಂಟಾಗಿ ಹಲವಾರು ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಮರಾಟಿ ನಾಯ್ಕ ಸಮುದಾಯದ ಪ್ರಮುಖರಾದ ತಿಮ್ಮಯ್ಯ ನಾಯ್ಕ ಮಲೆಯಡ್ಕ, ನಾರಾಯಣ ನಾಯ್ಕ ಮಲೆಯಡ್ಕ, ದಯಾನಂದ ನಾಯ್ಕ ಇಚ್ಚಾವು, ಮುನೀಶ್ ಇಚ್ಚಾವು ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಅಡ್ವೊಕೇಟ್ ಸೋಮಶೇಖರ್ ರಾಜವಂಶಿ ಅರ್ಜಿದಾರರ ಪರವಾಗಿ ಹೈಕೋರ್ಟ್ನಲ್ಲಿ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಾಲಯ ಇದೀಗ ವಿಚಾರಣೆಗಾಗಿ ಮುಗ್ರೋಡಿ ಹಾಟ್‌ಮಿಕ್ಸ್ ಘಟಕ, ಸರಕಾರದ ಮುಖ್ಯ ಕಾರ್ಯದರ್ಶಿ, ತಹಶೀಲ್ದಾರ್, ಜಿಲ್ಲಾಧಿಕಾರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನಡ ಗ್ರಾ.ಪಂ ಪಿಡಿಒ ಅವರಿಗೆ ನೋಟೀಸು ಜಾರಿ ಮಾಡಿದೆ ಎಂದು ವರದಿಯಾಗಿದೆ.

Related posts

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಹೃದಯ ರೋಗಿಗೆ ಧನಸಹಾಯ ಹಸ್ತಾಂತರ

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya
error: Content is protected !!