25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಅಂಡಿಂಜೆ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ಸ್ಕಿಡ್ ಆಗಿ ಮಗುಚಿ ಬಿದ್ದ ದ್ವಿಚಕ್ರ ವಾಹನ : ಸವಾರ ಕೊಕ್ರಾಡಿ ಗ್ರಾಮದ ಸುಂದರ ಶೆಟ್ಟಿ ಮೃತ್ಯು

ಅಂಡಿಂಜೆ: ಅಂಡಿಂಜೆ ಗ್ರಾಮದ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ದ್ವಿಚಕ್ರ ಸ್ಕಿಡ್ ಆಗಿ ಮಗುಚಿ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಡಿ.28 ರಂದು ವರದಿಯಾಗಿದೆ.

ಕೊಕ್ರಾಡಿ ಗ್ರಾಮದಆದರ್ಶ ನಗರ ನಿವಾಸಿ ಸುಂದರ ಶೆಟ್ಟಿ, (66 ವರ್ಷ) ಈ ದುಘ೯ಟನೆಯಲ್ಲಿ ಮೃತಪಟ್ಟವರು.

ಘಟನೆ ಹಿನ್ನೆಲೆ:
ಡಿ. 28ರಂದು ಸಂಜೆ ಸುಮಾರು 5:45ಕ್ಕೆ ಅಂಡಿಂಜೆ ಗ್ರಾಮದ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ವೇಣೂರು- ನಾರಾವಿ ಸಾರ್ವಜನಿಕ ಡಾಮಾರು ರಸ್ತೆಯ ಸ್ವಲ್ಪ ಇಳಿಜಾರು ರಸ್ತೆಯಲ್ಲಿ ದ್ವಿಚಕ್ರ ವಾಹನವನ್ನು ಅದರ ಸವಾರ ಸುಂದರ ಶೆಟ್ಟಿ ಎಂಬವರು ವೇಣೂರು ಕಡೆಯಿಂದ ನಾರಾವಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿದ ಪರಿಣಾಮ ಚಾಲಕನ ಹತೋಟಿ ತಪ್ಪಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಸವಾರ ಸುಂದರ ಶೆಟ್ಟಿ ವಾಹನದೊಂದಿಗೆ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ರೋಶನ್ ಮತ್ತಿತರರು ಸೇರಿ ಚಿಕಿತ್ಸೆಯ ಬಗ್ಗೆ ಮೂಡಬಿದ್ರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅವರು ದಾರಿ ಮಧ್ಯೆ ಮೃತ ಪಟ್ಟರೆನ್ನಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಡುಕೋಡಿ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ವಂಚನೆ ಆರೋಪ: 7 ಮಂದಿ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya
error: Content is protected !!