22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿ

ಅಂಡಿಂಜೆ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ಸ್ಕಿಡ್ ಆಗಿ ಮಗುಚಿ ಬಿದ್ದ ದ್ವಿಚಕ್ರ ವಾಹನ : ಸವಾರ ಕೊಕ್ರಾಡಿ ಗ್ರಾಮದ ಸುಂದರ ಶೆಟ್ಟಿ ಮೃತ್ಯು

ಅಂಡಿಂಜೆ: ಅಂಡಿಂಜೆ ಗ್ರಾಮದ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ದ್ವಿಚಕ್ರ ಸ್ಕಿಡ್ ಆಗಿ ಮಗುಚಿ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಡಿ.28 ರಂದು ವರದಿಯಾಗಿದೆ.

ಕೊಕ್ರಾಡಿ ಗ್ರಾಮದಆದರ್ಶ ನಗರ ನಿವಾಸಿ ಸುಂದರ ಶೆಟ್ಟಿ, (66 ವರ್ಷ) ಈ ದುಘ೯ಟನೆಯಲ್ಲಿ ಮೃತಪಟ್ಟವರು.

ಘಟನೆ ಹಿನ್ನೆಲೆ:
ಡಿ. 28ರಂದು ಸಂಜೆ ಸುಮಾರು 5:45ಕ್ಕೆ ಅಂಡಿಂಜೆ ಗ್ರಾಮದ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ವೇಣೂರು- ನಾರಾವಿ ಸಾರ್ವಜನಿಕ ಡಾಮಾರು ರಸ್ತೆಯ ಸ್ವಲ್ಪ ಇಳಿಜಾರು ರಸ್ತೆಯಲ್ಲಿ ದ್ವಿಚಕ್ರ ವಾಹನವನ್ನು ಅದರ ಸವಾರ ಸುಂದರ ಶೆಟ್ಟಿ ಎಂಬವರು ವೇಣೂರು ಕಡೆಯಿಂದ ನಾರಾವಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿದ ಪರಿಣಾಮ ಚಾಲಕನ ಹತೋಟಿ ತಪ್ಪಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಸವಾರ ಸುಂದರ ಶೆಟ್ಟಿ ವಾಹನದೊಂದಿಗೆ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ರೋಶನ್ ಮತ್ತಿತರರು ಸೇರಿ ಚಿಕಿತ್ಸೆಯ ಬಗ್ಗೆ ಮೂಡಬಿದ್ರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅವರು ದಾರಿ ಮಧ್ಯೆ ಮೃತ ಪಟ್ಟರೆನ್ನಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ಪತ್ರಕರ್ತನಿಗೆ ಜೀವ ಬೆದರಿಕೆ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,-ಕ್ರಮಕ್ಕೆ ಆಗ್ರಹ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಶವ ಎಸೆದ ಪ್ರಕರಣ: ಫಲ ನೀಡದ ಕಾರ್ಯಚರಣೆ

Suddi Udaya
error: Content is protected !!