23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

ಬೆಳ್ತಂಗಡಿ: ಮಂಗಳೂರಿನ ಕಾರ್‌ಸ್ಟ್ರೀಟ್‌ನಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ಸುವರ್ಣ ವರ್ಷಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ 14ನೇ ಕಾರ್ಯಕ್ರಮ ಉಜಿರೆ -ಬೆಳಾಲು ರಸ್ತೆಯಲ್ಲಿ ಡಿ.27 ರಂದು ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ನಡೆಯಿತು.

ಉಜಿರೆ ಗೌಡರ ಯಾನೆ ಒಕ್ಕಲಿಗರ ಸಂಘ ಗೌರವಾಧ್ಯಕ್ಷ ಗೋಪಾಲಕೃಷ್ಣ ಜಿ.ಕೆ, ಬಂಟರ ಸಂಘ ಉಜಿರೆ ಇದರ ನಿರ್ದೇಶಕರಾದ ವೆಂಕಟರಮಣ ಶೆಟ್ಟಿ, ಉಜಿರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಲಕ್ಷ್ಮಣ್ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. ಉಜಿರೆಯ ಬೆಳಾಲು ಕ್ರಾಸ್ ಹಾಗೂ ಕುವೆಂಪುನಗರ ಪರಿಸರಗಳಲ್ಲಿ ಸ್ವಯಂಸೇವಕರು ಶ್ರಮದಾನ ನಡೆಸಿ, ಪರಸರ ಸ್ವಚ್ಛತಾ ಕಾರ್ಯ ಮಾಡಿದರು.

ಉಜಿರೆ ಬಂಟರ ಸಂಘದ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ ಮಾತನಾಡಿ, ವಿಶ್ವಕರ್ಮ ಸಹಕಾರ ಬ್ಯಾಂಕ್ ತನ್ನ ಬ್ಯಾಂಕಿಂಗ್ ಚಟುವಟಿಕೆಯೊಂದಿಗೆ ಸಾಮಾಜಿಕ ಕಾರ್ಯಗಳಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿರುವುದು ಬ್ಯಾಂಕಿನ ಸಾಮಾಜಿಕ ಬದ್ಧತೆಗೆ ಹಿಡಿದ ಕೈಗನ್ನಡಿ ಎಂದು ಶ್ಲಾಘಿಸಿದರು. ನಂದಗೋಕುಲ ಗೋಶಾಲೆಯ ಅಧ್ಯಕ್ಷ ಡಾ. ಎಂ.ಎಂ ದಯಾಕರ್ ಮಾತನಾಡಿ, ಸ್ವಚ್ಛತೆಯ ಕಾರ್ಯವು ನಮ್ಮ ಮನೆಯಿಂದಲೇ ಪ್ರಾರಂಭವಾಗಬೇಕು, ಮುಂದಿನ ಪೀಳಿಗೆಗೂ ಸ್ವಚ್ಛತೆಯ ಅರಿವು ಮೂಡಿಸಬೇಕಾದರೆ ಇಂಥಹ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಗಳು ಅಗತ್ಯ. ಈ ನಿಟ್ಟಿನಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ಹಮ್ಮಿಕೊಂಡಿರುವ ಈ ಸ್ವಚ್ಛತಾ ಅಭಿಯಾನದ ಕೆಲಸ ಅತ್ಯುತ್ತಮವಾದುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬ್ಯಾಂಕಿನ ನಿರ್ದೇಶಕ ಡಿ.ಭಾಸ್ಕರ ಆಚಾರ್ಯ, ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಉಷಾ ಕಿರಣ್, ಉಪಾಧ್ಯಕ್ಷ ರವಿ ಮತ್ತು ಸದಸ್ಯರು, ಲಯನ್ಸ್ ಕ್ಲಬ್ ಉಜಿರೆ ಇದರ ಅಧ್ಯಕ್ಷ ಮುರಳಿ ಬಲಿಪ ಹಾಗೂ ಸದಸ್ಯರು, ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಹಾಗೂ ಸದಸ್ಯರು, ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಮಹೇಶ್ ಪಾಟೀಲ್ ಮತ್ತು ವಿದ್ಯಾರ್ಥಿಗಳು, ಬ್ಯಾಂಕಿನ ಗ್ರಾಹಕರು, ಸದಸ್ಯರು, ಉಜಿರೆ ಶಾಖಾ ವ್ಯವಸ್ಥಾಪಕ ಲೋಕೇಶ್ ಎಸ್ ಆರ್ ಹಾಗೂ ಸಿಬ್ಬಂದಿ ವರ್ಗದವರು ಸ್ವಯಂಸೇವಕರಾಗಿ ಭಾಗವಹಿಸಿದ್ದರು.

Related posts

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಮಾಧುರ್ಯ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya
error: Content is protected !!