22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

ಅರಸಿನಮಕ್ಕಿ: ಅರಸಿನಮಕ್ಕಿಯಲ್ಲಿ ಜನೌಷಧಿ ಮಳಿಗೆ ಉದ್ಘಾಟನೆ ನೆರವೇರಿಸಿದ ಕೇಂದ್ರ ಕಾರ್ಮಿಕ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನಿಡ್ಲೆ ಅಗ್ರಿಲೀಫ್ ಎಕ್ಸ್ ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸ್ಥಾಪಕ ಅವಿನಾಶ್ ರಾವ್ ಅವರು ಭೇಟಿ ಮಾಡಿ, ತಮ್ಮ ಸಂಸ್ಥೆಯ ಉತ್ಪನ್ನಗಳನ್ನು ನೀಡಿದರು.

ಶೋಭಾ ಅವರ ಭಾವಚಿತ್ರವುಳ್ಳ, ಸಂಸ್ಥೆಯಲ್ಲಿ ತಯಾರು ಮಾಡಿದ ಬಾಕ್ಸ್ ಮಾದರಿಯ ಮರದ ಉತ್ಪನ್ನವನ್ನು ಉಡುಗೊರೆಯಾಗಿ ನೀಡಿದರು.ಅಗ್ರಿಲೀಫ್ ಉತ್ಪನ್ನ ಹಾಗೂ ಅವರ ಪರಿಸರ ಸ್ನೇಹಿ ಕೆಲಸಗಳಿಗೆ ಸಚಿವೆ ಶೋಭಾ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜಾ ಅವರು ಕೂಡ ಗ್ರಾಮೀಣ ಭಾಗದಲ್ಲಿ ಅಗ್ರಿಲೀಫ್ ಮಾಡುತ್ತಿರುವ ಕಾರ್ಯಗಳ ಬಗ್ಗೆ ಸಚಿವೆಗೆ ವಿವರಣೆ ನೀಡಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹತ್ಯಡ್ಕ ಸೊಸೈಟಿ ಅಧ್ಯಕ್ಷ ರಾಘವೇಂದ್ರ ನಾಯಕ್, ಉಪಾಧ್ಯಕ್ಷ ರಾಜು ಸಾಲ್ಯಾನ್, ಪಂಚಾಯತ್‌ ಅಧ್ಯಕ್ಷೆ ಗಾಯತ್ರಿ ಉಪಸ್ಥಿತರಿದ್ದರು.

Related posts

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

‍ಮುಂಡಾಜೆ: ಇಂದುಮತಿ ಫಡಕೆ ನಿಧನ

Suddi Udaya

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

Suddi Udaya

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya
error: Content is protected !!