ಬೆಳ್ತಂಗಡಿ : ಇಂದಬೆಟ್ಟು ಖಾಸಗಿ ಕಾರ್ಯಕ್ರಮದಲ್ಲಿ ಜಾತಿಯ ಬಗ್ಗೆ ದ್ವೇಷ ಭಾಷಣ ಮಾಡಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್ ಎಂಬವರು ದಾಖಲಿಸಿದ್ದ 14/2025 ರ 353(2) ಸೆಕ್ಷನ್ ಅಡಿಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿ ಪದೆ ಪದೆ ನ್ಯಾಯಾಲಯಕ್ಕೆ ಗೈರಾಗುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಗೆ ಡಿ.24 ರಂದು ಬೆಳ್ತಂಗಡಿ ನ್ಯಾಯಾಲಯ ಬಂಧನದ ವಾರಂಟ್ ಜಾರಿ ಮಾಡಲಾಗಿದೆ.
ಸದ್ಯ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣದಲ್ಲಿ ಕಳೆದ ಮೂರು ವಾರಗಳಿಂದ ಬೆಳ್ತಂಗಡಿ ಪೊಲೀಸರಿಂದ ತಲೆಮರೆಸಿಕೊಂಡಿದ್ದಾರೆ.











