22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ಮನೆಗೆ ವಾಪಾಸು ಹಿಂದಿರುಗದೆ ಕಾಣೆಯಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ಪುರುಷರಬೆಟ್ಟು ಎಂಬಲ್ಲಿ ಡಿ.27 ರಂದು ನಡೆದಿದೆ.

ಕಾಣೆಯಾದ ವ್ಯಕ್ತಿ ಜಿನ್ನಪ್ಪ ಗೌಡರ ಹಿರಿಯ ಪುತ್ರ ರಾಜೇಶ್ ಪಿ. (30ವ) ಅವರು ಒಂದು ವರ್ಷದ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು, ಬಳಿಕ ವಾಪಾಸು ಊರಿಗೆ ಬಂದು ಕೆಲಸವಿಲ್ಲದೆ ತಂದೆ-ತಾಯಿಯ ಜೊತೆಗೆ ಮನೆಯಲ್ಲಿ ವಾಸವಿದ್ದರು, ಡಿ. 27 ರಂದು ಅವರ ತಮ್ಮ ಪ್ರಶಾಂತ್ ಪಿ ಅವರು ರಜೆಯ ಕಾರಣ ಮನೆಗೆ ಬಂದಾಗ ಅಣ್ಣ ರಾಜೇಶ್ ಕಾಣದಿರುವುದನ್ನು ತಾಯಿಯಲ್ಲಿ ವಿಚಾರಿಸಿದಾಗ ಅವನು ಬೆಳಿಗ್ಗೆ 10:00 ಗಂಟೆಗೆ ಮನೆಯಿಂದ ಹೊರಗೆ ಹೋದವನು ವಾಪಾಸು ಬಂದಿರುವುದಿಲ್ಲವಾಗಿ ತಿಳಿಸಿದರು. ಅವರ ಮೊಬೈಲ್‌ಗೆ ಕರೆ ಮಾಡಿದರೆ ಕರೆಯನ್ನು ಸ್ವೀಕರಿಸುತ್ತಿರಲಿಲ್ಲ, ನೆರೆ ಮನೆ, ಸಂಬಂಧಿಕರಿಗೆ ವಿಚಾರ ತಿಳಿಸಿ ಮನೆಯ ವಠಾರದಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ, ರಾತ್ರಿ ಸಮಯ ಮನೆಗೆ ಬರಬಹುದೆಂದು ಕಾದು ನೋಡಿದರೂ ಈವರೆಗೆ ವಾಪಾಸು ಮನೆಗೆ ಬಾರದೇ ಇರುವುದರ ಕುರಿತು ಅವರನ್ನು ಪತ್ತೆ ಹಚ್ಚಿಕೊಡಬೇಕು ಎಂದು ತಮ್ಮ ಪ್ರಶಾಂತ್ ಪಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.

ಸಾಧರಣ ಶರೀರ, 5.6 ಅಡಿ ಎತ್ತರ, ಕಪ್ಪು ಬಣ್ಣದ ಉದ್ದ ತೋಳಿನ ಶರ್ಟ್ ಹಾಗೂ ಬರ್ಮುಡ ಧರಿಸಿದ್ದು ತುಳು, ಕನ್ನಡ, ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ.೮೨/೨೫ ಕಲಂ ಅಡಿ ಮನುಷ್ಯ ಕಾಣೆಯಾಂತೆ ದೂರು ದಾಖಲಾಗಿದೆ.

Related posts

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya
error: Content is protected !!