22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

ಬೆಳ್ತಂಗಡಿ: ಡಿ.27 ರಿಂದ ಜ. 1 ರವರೆಗೆ 7 ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ 29 ನೇ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್‌ ಅಕ್ಕಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಸಾದ ರೂಪದಲ್ಲಿ ನೀಡಿ ಜಾಂಬೋರೇಟ್ ಗೆ ಶುಭ ಹಾರೈಸಿದ್ದಾರೆ.

ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ.ಹರ್ಷೆಂದ್ರ ಕುಮಾರ್‌ ಇವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಿಂದ ಕಳುಹಿಸಿಕೊಡಲಾಯಿತು. ಅಕ್ಕಿಯನ್ನು ಕಳುಹಿಸುವ ಸಂದರ್ಭದಲ್ಲಿ ಭಾರತ್‌ ಸ್ಸ್ಕೌಟ್ಸ್‌ & ಗೈಡ್ಸ್‌, ಬೆಳ್ತಂಗಡಿ ಸ್ಧಳೀಯ‌ ಸಂಸ್ದೆಯ ಕಾರ್ಯದರ್ಶಿ ಪ್ರಮೀಳಾ , ಜಿಲ್ಲಾ ಸಹಾಯಕ ಆಯುಕ್ತರಾದ ಬಿ ಸೋಮಶೇಖರ ಶೆಟ್ಟಿ ಮತ್ತು ಅನ್ನಪೂರ್ಣ ಛತ್ರದ ನಿರ್ವಹಣಾಧಿಕಾರಿಯಾದ ಜಿ ಸುಬ್ರಮಣ್ಯ ಪ್ರಸಾದ್‌ ಹಸಿರು ನಿಶಾನೆ ತೋರಿಸಿ ಪ್ರಯಾಣಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅನ್ನಪೂರ್ಣ ಛತ್ರದ ಭರತ್‌ರಾಜ್‌ ಜೈನ್‌, ಎಸ್.ಡಿ.ಎಂ.ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ರಾಜೇಶ ಬಿ, ರೋವರ್‌ ಸ್ಕೌಟ್‌ ಲೀಡರ್‌ ಲಕ್ಷ್ಮೀಶ ಭಟ್ಟ,ರೋವರ್ ಸರ್ವೇಶ್‌ ಜೈನ್‌, ತೇಜಸ್ವಿ ಹೆಗಡೆ ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya
error: Content is protected !!