ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

ಬೆಳ್ತಂಗಡಿ: ಡಿ.27 ರಿಂದ ಜ. 1 ರವರೆಗೆ 7 ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ 29 ನೇ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್‌ ಅಕ್ಕಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಸಾದ ರೂಪದಲ್ಲಿ ನೀಡಿ ಜಾಂಬೋರೇಟ್ ಗೆ ಶುಭ ಹಾರೈಸಿದ್ದಾರೆ.

ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ.ಹರ್ಷೆಂದ್ರ ಕುಮಾರ್‌ ಇವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಿಂದ ಕಳುಹಿಸಿಕೊಡಲಾಯಿತು. ಅಕ್ಕಿಯನ್ನು ಕಳುಹಿಸುವ ಸಂದರ್ಭದಲ್ಲಿ ಭಾರತ್‌ ಸ್ಸ್ಕೌಟ್ಸ್‌ & ಗೈಡ್ಸ್‌, ಬೆಳ್ತಂಗಡಿ ಸ್ಧಳೀಯ‌ ಸಂಸ್ದೆಯ ಕಾರ್ಯದರ್ಶಿ ಪ್ರಮೀಳಾ , ಜಿಲ್ಲಾ ಸಹಾಯಕ ಆಯುಕ್ತರಾದ ಬಿ ಸೋಮಶೇಖರ ಶೆಟ್ಟಿ ಮತ್ತು ಅನ್ನಪೂರ್ಣ ಛತ್ರದ ನಿರ್ವಹಣಾಧಿಕಾರಿಯಾದ ಜಿ ಸುಬ್ರಮಣ್ಯ ಪ್ರಸಾದ್‌ ಹಸಿರು ನಿಶಾನೆ ತೋರಿಸಿ ಪ್ರಯಾಣಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅನ್ನಪೂರ್ಣ ಛತ್ರದ ಭರತ್‌ರಾಜ್‌ ಜೈನ್‌, ಎಸ್.ಡಿ.ಎಂ.ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ರಾಜೇಶ ಬಿ, ರೋವರ್‌ ಸ್ಕೌಟ್‌ ಲೀಡರ್‌ ಲಕ್ಷ್ಮೀಶ ಭಟ್ಟ,ರೋವರ್ ಸರ್ವೇಶ್‌ ಜೈನ್‌, ತೇಜಸ್ವಿ ಹೆಗಡೆ ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!