25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

ಬೆಳ್ತಂಗಡಿ: ಡಿ.27 ರಿಂದ ಜ. 1 ರವರೆಗೆ 7 ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ 29 ನೇ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್‌ ಅಕ್ಕಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಸಾದ ರೂಪದಲ್ಲಿ ನೀಡಿ ಜಾಂಬೋರೇಟ್ ಗೆ ಶುಭ ಹಾರೈಸಿದ್ದಾರೆ.

ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ.ಹರ್ಷೆಂದ್ರ ಕುಮಾರ್‌ ಇವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಿಂದ ಕಳುಹಿಸಿಕೊಡಲಾಯಿತು. ಅಕ್ಕಿಯನ್ನು ಕಳುಹಿಸುವ ಸಂದರ್ಭದಲ್ಲಿ ಭಾರತ್‌ ಸ್ಸ್ಕೌಟ್ಸ್‌ & ಗೈಡ್ಸ್‌, ಬೆಳ್ತಂಗಡಿ ಸ್ಧಳೀಯ‌ ಸಂಸ್ದೆಯ ಕಾರ್ಯದರ್ಶಿ ಪ್ರಮೀಳಾ , ಜಿಲ್ಲಾ ಸಹಾಯಕ ಆಯುಕ್ತರಾದ ಬಿ ಸೋಮಶೇಖರ ಶೆಟ್ಟಿ ಮತ್ತು ಅನ್ನಪೂರ್ಣ ಛತ್ರದ ನಿರ್ವಹಣಾಧಿಕಾರಿಯಾದ ಜಿ ಸುಬ್ರಮಣ್ಯ ಪ್ರಸಾದ್‌ ಹಸಿರು ನಿಶಾನೆ ತೋರಿಸಿ ಪ್ರಯಾಣಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅನ್ನಪೂರ್ಣ ಛತ್ರದ ಭರತ್‌ರಾಜ್‌ ಜೈನ್‌, ಎಸ್.ಡಿ.ಎಂ.ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ರಾಜೇಶ ಬಿ, ರೋವರ್‌ ಸ್ಕೌಟ್‌ ಲೀಡರ್‌ ಲಕ್ಷ್ಮೀಶ ಭಟ್ಟ,ರೋವರ್ ಸರ್ವೇಶ್‌ ಜೈನ್‌, ತೇಜಸ್ವಿ ಹೆಗಡೆ ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

Suddi Udaya
error: Content is protected !!