22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನಲ್ಲಿ ಕ್ರಿಸ್ಮಸ್ ಸೌಹಾರ್ದ ಕೂಟ

ವೇಣೂ: ಯೇಸು ಸ್ವಾಮಿ ಬೋಧಿಸಿದ ಪ್ರೀತಿ, ಕರುಣೆ ,ಕ್ಷಮೆಮತ್ತು ಮಾನವೀಯತೆಯನ್ನುನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ವೇಣೂರು ಚರ್ಚಿನ ಧರ್ಮಗುರುಗಳಾದ ವಂ।ಸ್ವಾಮಿ ಎಡ್ವಿನ್ ಸಂತೋಷ್ ಮೋನಿಸ್ ಹೇಳಿದರು.

ಅವರು ವೇಣೂರಿನಲ್ಲಿ ಜರಗಿದ ಕ್ರಿಸ್ಮಸ್ ಸೌಹಾರ್ದ ಕೂಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ್ದರು.ಮುಖ್ಯ ಅತಿಥಿಗಳಾಗಿ ಖ್ಯಾತ ಚಿಂತಕ ಅರವಿಂದ ಚೊಕ್ಕಾಡಿ, ಖತೀಬರಾದ ಜ।ಮುಹಮ್ಮದ್ ಔಹರ್ ಅಹ್ ಹನಿ, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಕಾಶಿನಾಥ್, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಧಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ ಭಾಗವಹಿಸಿದ್ದರು.

ಚರ್ಚ್ ಉಪಾಧ್ಯಕ್ಷ ಡೆನಿಸ್ ಸಿಕ್ವೇರ ಸ್ವಾಗತಿಸಿದರು.ಕಾರ್ಯದರ್ಶಿ ಶ್ರೀಮತಿ ಜೆತ್ರುದ್ ಡಿ ಸೋಜ ವಂದಿಸಿದರು. ಶಿಕ್ಷಕ ವಿನೋದ್ ಮೋನಿಸ್ ನಿರ್ವಹಿಸಿದರು. ವಿವಿಧ ಧರ್ಮಗಳ ಗಣ್ಯರು ಉಪಸ್ಥಿತರಿದ್ದರು. ಸ್ಥಳೀಯ ಕೆಥೋಲಿಕ್ ಸಭಾ ಅಧ್ಯಕ್ಷ ಅರುಣ್ ಡಿ ಸೋಜ, ಐಸಿವೈಎಂ ಅಧ್ಯಕ್ಷೆ ಕು।ಜೆಸ್ವಿನ್ ಲೋಬೊ, ಚರ್ಚಿನ ಮಾಜಿ ಉಪಾಧ್ಯಕ್ಷರಾದ ಎಲ್ ಜೆ ಫೆರ್ನಾಂಡಿಸ್ ಮತ್ತು ತೋಮಸ್ ರೆಮಿ ನೊರೋನ್ಹ ಸಹಕರಿಸಿದರು.
ವರದಿ: ಹೆಚ್ ಮಹಮ್ಮದ್

Related posts

ನ್ಯಾಯತರ್ಪು: ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಪೋಷಕ-ಶಿಕ್ಷಕರ ಮಹಾಸಭೆ

Suddi Udaya

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya
error: Content is protected !!