September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನಲ್ಲಿ ಕ್ರಿಸ್ಮಸ್ ಸೌಹಾರ್ದ ಕೂಟ

ವೇಣೂ: ಯೇಸು ಸ್ವಾಮಿ ಬೋಧಿಸಿದ ಪ್ರೀತಿ, ಕರುಣೆ ,ಕ್ಷಮೆಮತ್ತು ಮಾನವೀಯತೆಯನ್ನುನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ವೇಣೂರು ಚರ್ಚಿನ ಧರ್ಮಗುರುಗಳಾದ ವಂ।ಸ್ವಾಮಿ ಎಡ್ವಿನ್ ಸಂತೋಷ್ ಮೋನಿಸ್ ಹೇಳಿದರು.

ಅವರು ವೇಣೂರಿನಲ್ಲಿ ಜರಗಿದ ಕ್ರಿಸ್ಮಸ್ ಸೌಹಾರ್ದ ಕೂಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ್ದರು.ಮುಖ್ಯ ಅತಿಥಿಗಳಾಗಿ ಖ್ಯಾತ ಚಿಂತಕ ಅರವಿಂದ ಚೊಕ್ಕಾಡಿ, ಖತೀಬರಾದ ಜ।ಮುಹಮ್ಮದ್ ಔಹರ್ ಅಹ್ ಹನಿ, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಕಾಶಿನಾಥ್, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಧಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ ಭಾಗವಹಿಸಿದ್ದರು.

ಚರ್ಚ್ ಉಪಾಧ್ಯಕ್ಷ ಡೆನಿಸ್ ಸಿಕ್ವೇರ ಸ್ವಾಗತಿಸಿದರು.ಕಾರ್ಯದರ್ಶಿ ಶ್ರೀಮತಿ ಜೆತ್ರುದ್ ಡಿ ಸೋಜ ವಂದಿಸಿದರು. ಶಿಕ್ಷಕ ವಿನೋದ್ ಮೋನಿಸ್ ನಿರ್ವಹಿಸಿದರು. ವಿವಿಧ ಧರ್ಮಗಳ ಗಣ್ಯರು ಉಪಸ್ಥಿತರಿದ್ದರು. ಸ್ಥಳೀಯ ಕೆಥೋಲಿಕ್ ಸಭಾ ಅಧ್ಯಕ್ಷ ಅರುಣ್ ಡಿ ಸೋಜ, ಐಸಿವೈಎಂ ಅಧ್ಯಕ್ಷೆ ಕು।ಜೆಸ್ವಿನ್ ಲೋಬೊ, ಚರ್ಚಿನ ಮಾಜಿ ಉಪಾಧ್ಯಕ್ಷರಾದ ಎಲ್ ಜೆ ಫೆರ್ನಾಂಡಿಸ್ ಮತ್ತು ತೋಮಸ್ ರೆಮಿ ನೊರೋನ್ಹ ಸಹಕರಿಸಿದರು.
ವರದಿ: ಹೆಚ್ ಮಹಮ್ಮದ್

Related posts

ಸರಕಾರಿ ಬಸ್ಸಿನಲ್ಲೇ ಹೃದಯಾಘಾತವಾಗಿ ಲಾಯಿಲದ ಇಲೆಕ್ಟ್ರೀಷಿಯನ್ ತಾಜ್ ಬಾವುಂಞಿ ನಿಧನ

Suddi Udaya

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya

ಬೆಳಗಾವಿ ಅಧಿವೇಶನ: ಅಧಿಕ ಮಳೆಯಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ: ಪ್ರತಾಪ್ ಸಿಂಹ ನಾಯಕ್

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕನ್ಯಾಡಿ ಪುನಶ್ಚೇತನ ಕೇಂದ್ರಕ್ಕೆ ರೂ.10 ಲಕ್ಷ ಅನುದಾನ

Suddi Udaya
error: Content is protected !!