25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನಲ್ಲಿ ಕ್ರಿಸ್ಮಸ್ ಸೌಹಾರ್ದ ಕೂಟ

ವೇಣೂ: ಯೇಸು ಸ್ವಾಮಿ ಬೋಧಿಸಿದ ಪ್ರೀತಿ, ಕರುಣೆ ,ಕ್ಷಮೆಮತ್ತು ಮಾನವೀಯತೆಯನ್ನುನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ವೇಣೂರು ಚರ್ಚಿನ ಧರ್ಮಗುರುಗಳಾದ ವಂ।ಸ್ವಾಮಿ ಎಡ್ವಿನ್ ಸಂತೋಷ್ ಮೋನಿಸ್ ಹೇಳಿದರು.

ಅವರು ವೇಣೂರಿನಲ್ಲಿ ಜರಗಿದ ಕ್ರಿಸ್ಮಸ್ ಸೌಹಾರ್ದ ಕೂಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ್ದರು.ಮುಖ್ಯ ಅತಿಥಿಗಳಾಗಿ ಖ್ಯಾತ ಚಿಂತಕ ಅರವಿಂದ ಚೊಕ್ಕಾಡಿ, ಖತೀಬರಾದ ಜ।ಮುಹಮ್ಮದ್ ಔಹರ್ ಅಹ್ ಹನಿ, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಕಾಶಿನಾಥ್, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಧಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ ಭಾಗವಹಿಸಿದ್ದರು.

ಚರ್ಚ್ ಉಪಾಧ್ಯಕ್ಷ ಡೆನಿಸ್ ಸಿಕ್ವೇರ ಸ್ವಾಗತಿಸಿದರು.ಕಾರ್ಯದರ್ಶಿ ಶ್ರೀಮತಿ ಜೆತ್ರುದ್ ಡಿ ಸೋಜ ವಂದಿಸಿದರು. ಶಿಕ್ಷಕ ವಿನೋದ್ ಮೋನಿಸ್ ನಿರ್ವಹಿಸಿದರು. ವಿವಿಧ ಧರ್ಮಗಳ ಗಣ್ಯರು ಉಪಸ್ಥಿತರಿದ್ದರು. ಸ್ಥಳೀಯ ಕೆಥೋಲಿಕ್ ಸಭಾ ಅಧ್ಯಕ್ಷ ಅರುಣ್ ಡಿ ಸೋಜ, ಐಸಿವೈಎಂ ಅಧ್ಯಕ್ಷೆ ಕು।ಜೆಸ್ವಿನ್ ಲೋಬೊ, ಚರ್ಚಿನ ಮಾಜಿ ಉಪಾಧ್ಯಕ್ಷರಾದ ಎಲ್ ಜೆ ಫೆರ್ನಾಂಡಿಸ್ ಮತ್ತು ತೋಮಸ್ ರೆಮಿ ನೊರೋನ್ಹ ಸಹಕರಿಸಿದರು.
ವರದಿ: ಹೆಚ್ ಮಹಮ್ಮದ್

Related posts

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya
error: Content is protected !!