September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

ಬೆಳ್ತಂಗಡಿ : ಒಂದು ಕಡೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಕಾನೂನಿನ ಹೆಸರಿನಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿದ್ದರೆ, ಇನ್ನೊಂದೆಡೆ ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದೆ. ಈ ಎರಡೂ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಹಿಂದೂ ಜನಜಾಗೃತಿ ಸಮಿತಿಯು, ಹಿಂದೂ ಸಮಾಜದ ರಕ್ಷಣೆಗಾಗಿ ರಾಜ್ಯದ ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರಗಳು ತಕ್ಷಣವೇ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದೆ.

ಅಸಂವಿಧಾನಿಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ ಕಾಯ್ದೆಗೆ ಅನುಮತಿ ನೀಡಬಾರದು ಹಾಗೂ ಬಾಂಗ್ಲಾ ಹಿಂದೂ ಅಲ್ಪ ಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲಿಸಲು ಭಾರತ ಸರಕಾರದಿಂದ ಕಠಿಣ ರಾಜಕೀಯ ಹಸ್ತಕ್ಷೇಪ ಹಾಗೂ ಅಂತಾರಾಷ್ಟ್ರೀಯ ಒತ್ತಡ ಹೇರುವಂತೆ ಆಗ್ರಹಿಸಿ ಬೆಳ್ತಂಗಡಿ ತಹಶೀಲ್ದಾರಾದ ಪೃಥ್ವಿ ಸಾನಿಕಂ ಇವರ ಮೂಲಕ ರಾಜ್ಯಪಾಲರಿಗೆ ಮತ್ತು ಪ್ರಧಾನಿಯವರಿಗೆ ಮನವಿಯನ್ನು ನೀಡಲಾಯಿತು.


ಹಿಂದೂ ಸಮಾಜದ ಅಸ್ತಿತ್ವಕ್ಕೆ ಧಕ್ಕೆ ತರುತ್ತಿರುವ ವಿಚಾರಗಳಲ್ಲಿ ಸರ್ಕಾರಗಳು ವಿಫಲವಾದರೆ ಹಿಂದೂ ಸಮಾಜವು ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯು ಎಚ್ಚರಿಸಿದೆ.

ಈ ಸಂದರ್ಭದಲ್ಲಿ ಧರ್ಮ ಪ್ರೇಮಿಗಳಾದ ಯಶವಂತ ಗೌಡ ಪಂಚಾಯತಿ ಅಧ್ಯಕ್ಷರು ಕೊಯ್ಯೂರು, ಉಮಾ ರಾವ್ ಮಹಿಳಾ ಒಕ್ಕೂಟ ಅಧ್ಯಕ್ಷರು ಬೆಳ್ತಂಗಡಿ, ಕೇಶವ ಅಚ್ಚಿನಡ್ಕ, ರಾಜೇಂದ್ರ ಜಿ ಕಾನರ್ಪ, ಮೋಹನ್ ಬೈರಾ ಪುತ್ರಬೈಲು, ವಸಂತ ಕಲ್ಲಾಜೆ, ಶಾಂತ ಉಜಿರೆ, ಸಂತೋಷ್ ಪನೇಜಾಲ್, ವಿನೋದ ಉಜಿರೆ, ವಸಂತ ಗುರುವಾಯನಕೆರೆ, ಶಾರದಾ ಭಂಡಾರಕರ್, ಯೋಗೀಶ್ ಕೆಂಬರ್ಜೆ, ಯಂ ಹರೀಶ್ ಜಿ ಮುದ್ದಿನಡ್ಕ ಮುಂತಾದವರು ಉಪಸ್ಥಿತರಿದ್ದರು.

Related posts

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya
error: Content is protected !!