25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

ಬೆಳ್ತಂಗಡಿ : ಪರಿಸರ ಮಾಲಿನ್ಯದಿಂದ ಸಮಸ್ಯೆಯಾಗಿದೆ ಎಂದು ಆರೋಪಿಸಿ, ಸಲ್ಲಿಕೆಯಾಗಿರುವ ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟು ನಡ ಮಲೆಯಡ್ಕ ಸಮೀಪದಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಗ್ರೋಡಿ ಹಾಟ್‌ಮಿಕ್ಸ್ ಘಟಕ, ಸರಕಾರದ ಮುಖ್ಯ ಕಾರ್ಯದರ್ಶಿ, ತಹಶೀಲ್ದಾರ್, ಜಿಲ್ಲಾಧಿಕಾರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನಡ ಗ್ರಾ.ಪಂ ಪಿಡಿಒ ಅವರಿಗೆ ನೋಟೀಸು ಜಾರಿ ಮಾಡಿದೆ.


2008 ರಿಂದ ಉಜಿರೆ- ಪಡ್ವೆಟ್ಟು-ಸುರ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಮಿಕ್ಸಿಂಗ್ ಘಟಕದಿಂದ ಪರಿಸರ ಮಾಲಿನ್ಯ ಉಂಟಾಗಿ ಹಲವಾರು ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಮರಾಟಿ ನಾಯ್ಕ ಸಮುದಾಯದ ಪ್ರಮುಖರಾದ ತಿಮ್ಮಯ್ಯ ನಾಯ್ಕ ಮಲೆಯಡ್ಕ, ನಾರಾಯಣ ನಾಯ್ಕ ಮಲೆಯಡ್ಕ, ದಯಾನಂದ ನಾಯ್ಕ ಇಚ್ಚಾವು, ಮುನೀಶ್ ಇಚ್ಚಾವು ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಅಡ್ವೊಕೇಟ್ ಸೋಮಶೇಖರ್ ರಾಜವಂಶಿ ಅರ್ಜಿದಾರರ ಪರವಾಗಿ ಹೈಕೋರ್ಟ್ನಲ್ಲಿ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಾಲಯ ಇದೀಗ ವಿಚಾರಣೆಗಾಗಿ ಮುಗ್ರೋಡಿ ಹಾಟ್‌ಮಿಕ್ಸ್ ಘಟಕ, ಸರಕಾರದ ಮುಖ್ಯ ಕಾರ್ಯದರ್ಶಿ, ತಹಶೀಲ್ದಾರ್, ಜಿಲ್ಲಾಧಿಕಾರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನಡ ಗ್ರಾ.ಪಂ ಪಿಡಿಒ ಅವರಿಗೆ ನೋಟೀಸು ಜಾರಿ ಮಾಡಿದೆ ಎಂದು ವರದಿಯಾಗಿದೆ.

Related posts

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಅಳದಂಗಡಿ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ: ಕರಂಬಾರು ಗ್ರಾಮದ ಲಲಿತಾ ಪೂಜಾರಿಯವರಿಗೆ ಆರೋಗ್ಯ ನಿಧಿ ಹಸ್ತಾಂತರ

Suddi Udaya

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya
error: Content is protected !!