23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

ಬೆಳ್ತಂಗಡಿ : ಪರಿಸರ ಮಾಲಿನ್ಯದಿಂದ ಸಮಸ್ಯೆಯಾಗಿದೆ ಎಂದು ಆರೋಪಿಸಿ, ಸಲ್ಲಿಕೆಯಾಗಿರುವ ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟು ನಡ ಮಲೆಯಡ್ಕ ಸಮೀಪದಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಗ್ರೋಡಿ ಹಾಟ್‌ಮಿಕ್ಸ್ ಘಟಕ, ಸರಕಾರದ ಮುಖ್ಯ ಕಾರ್ಯದರ್ಶಿ, ತಹಶೀಲ್ದಾರ್, ಜಿಲ್ಲಾಧಿಕಾರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನಡ ಗ್ರಾ.ಪಂ ಪಿಡಿಒ ಅವರಿಗೆ ನೋಟೀಸು ಜಾರಿ ಮಾಡಿದೆ.


2008 ರಿಂದ ಉಜಿರೆ- ಪಡ್ವೆಟ್ಟು-ಸುರ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಮಿಕ್ಸಿಂಗ್ ಘಟಕದಿಂದ ಪರಿಸರ ಮಾಲಿನ್ಯ ಉಂಟಾಗಿ ಹಲವಾರು ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಮರಾಟಿ ನಾಯ್ಕ ಸಮುದಾಯದ ಪ್ರಮುಖರಾದ ತಿಮ್ಮಯ್ಯ ನಾಯ್ಕ ಮಲೆಯಡ್ಕ, ನಾರಾಯಣ ನಾಯ್ಕ ಮಲೆಯಡ್ಕ, ದಯಾನಂದ ನಾಯ್ಕ ಇಚ್ಚಾವು, ಮುನೀಶ್ ಇಚ್ಚಾವು ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಅಡ್ವೊಕೇಟ್ ಸೋಮಶೇಖರ್ ರಾಜವಂಶಿ ಅರ್ಜಿದಾರರ ಪರವಾಗಿ ಹೈಕೋರ್ಟ್ನಲ್ಲಿ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಾಲಯ ಇದೀಗ ವಿಚಾರಣೆಗಾಗಿ ಮುಗ್ರೋಡಿ ಹಾಟ್‌ಮಿಕ್ಸ್ ಘಟಕ, ಸರಕಾರದ ಮುಖ್ಯ ಕಾರ್ಯದರ್ಶಿ, ತಹಶೀಲ್ದಾರ್, ಜಿಲ್ಲಾಧಿಕಾರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನಡ ಗ್ರಾ.ಪಂ ಪಿಡಿಒ ಅವರಿಗೆ ನೋಟೀಸು ಜಾರಿ ಮಾಡಿದೆ ಎಂದು ವರದಿಯಾಗಿದೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು

Suddi Udaya

ತ್ರೋಬಾಲ್ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya
error: Content is protected !!