September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

ಬೆಳ್ತಂಗಡಿ : ಪರಿಸರ ಮಾಲಿನ್ಯದಿಂದ ಸಮಸ್ಯೆಯಾಗಿದೆ ಎಂದು ಆರೋಪಿಸಿ, ಸಲ್ಲಿಕೆಯಾಗಿರುವ ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟು ನಡ ಮಲೆಯಡ್ಕ ಸಮೀಪದಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಗ್ರೋಡಿ ಹಾಟ್‌ಮಿಕ್ಸ್ ಘಟಕ, ಸರಕಾರದ ಮುಖ್ಯ ಕಾರ್ಯದರ್ಶಿ, ತಹಶೀಲ್ದಾರ್, ಜಿಲ್ಲಾಧಿಕಾರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನಡ ಗ್ರಾ.ಪಂ ಪಿಡಿಒ ಅವರಿಗೆ ನೋಟೀಸು ಜಾರಿ ಮಾಡಿದೆ.


2008 ರಿಂದ ಉಜಿರೆ- ಪಡ್ವೆಟ್ಟು-ಸುರ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಮಿಕ್ಸಿಂಗ್ ಘಟಕದಿಂದ ಪರಿಸರ ಮಾಲಿನ್ಯ ಉಂಟಾಗಿ ಹಲವಾರು ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಮರಾಟಿ ನಾಯ್ಕ ಸಮುದಾಯದ ಪ್ರಮುಖರಾದ ತಿಮ್ಮಯ್ಯ ನಾಯ್ಕ ಮಲೆಯಡ್ಕ, ನಾರಾಯಣ ನಾಯ್ಕ ಮಲೆಯಡ್ಕ, ದಯಾನಂದ ನಾಯ್ಕ ಇಚ್ಚಾವು, ಮುನೀಶ್ ಇಚ್ಚಾವು ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಅಡ್ವೊಕೇಟ್ ಸೋಮಶೇಖರ್ ರಾಜವಂಶಿ ಅರ್ಜಿದಾರರ ಪರವಾಗಿ ಹೈಕೋರ್ಟ್ನಲ್ಲಿ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಾಲಯ ಇದೀಗ ವಿಚಾರಣೆಗಾಗಿ ಮುಗ್ರೋಡಿ ಹಾಟ್‌ಮಿಕ್ಸ್ ಘಟಕ, ಸರಕಾರದ ಮುಖ್ಯ ಕಾರ್ಯದರ್ಶಿ, ತಹಶೀಲ್ದಾರ್, ಜಿಲ್ಲಾಧಿಕಾರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನಡ ಗ್ರಾ.ಪಂ ಪಿಡಿಒ ಅವರಿಗೆ ನೋಟೀಸು ಜಾರಿ ಮಾಡಿದೆ ಎಂದು ವರದಿಯಾಗಿದೆ.

Related posts

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಉಜಿರೆಯ ಪ್ರಣಮ್ಯ ಎಂ.ಕೆ. ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಮಾ.12: ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!