22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

ಬೆಳ್ತಂಗಡಿ : ಪರಿಸರ ಮಾಲಿನ್ಯದಿಂದ ಸಮಸ್ಯೆಯಾಗಿದೆ ಎಂದು ಆರೋಪಿಸಿ, ಸಲ್ಲಿಕೆಯಾಗಿರುವ ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟು ನಡ ಮಲೆಯಡ್ಕ ಸಮೀಪದಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಗ್ರೋಡಿ ಹಾಟ್‌ಮಿಕ್ಸ್ ಘಟಕ, ಸರಕಾರದ ಮುಖ್ಯ ಕಾರ್ಯದರ್ಶಿ, ತಹಶೀಲ್ದಾರ್, ಜಿಲ್ಲಾಧಿಕಾರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನಡ ಗ್ರಾ.ಪಂ ಪಿಡಿಒ ಅವರಿಗೆ ನೋಟೀಸು ಜಾರಿ ಮಾಡಿದೆ.


2008 ರಿಂದ ಉಜಿರೆ- ಪಡ್ವೆಟ್ಟು-ಸುರ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಮಿಕ್ಸಿಂಗ್ ಘಟಕದಿಂದ ಪರಿಸರ ಮಾಲಿನ್ಯ ಉಂಟಾಗಿ ಹಲವಾರು ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಮರಾಟಿ ನಾಯ್ಕ ಸಮುದಾಯದ ಪ್ರಮುಖರಾದ ತಿಮ್ಮಯ್ಯ ನಾಯ್ಕ ಮಲೆಯಡ್ಕ, ನಾರಾಯಣ ನಾಯ್ಕ ಮಲೆಯಡ್ಕ, ದಯಾನಂದ ನಾಯ್ಕ ಇಚ್ಚಾವು, ಮುನೀಶ್ ಇಚ್ಚಾವು ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಅಡ್ವೊಕೇಟ್ ಸೋಮಶೇಖರ್ ರಾಜವಂಶಿ ಅರ್ಜಿದಾರರ ಪರವಾಗಿ ಹೈಕೋರ್ಟ್ನಲ್ಲಿ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಾಲಯ ಇದೀಗ ವಿಚಾರಣೆಗಾಗಿ ಮುಗ್ರೋಡಿ ಹಾಟ್‌ಮಿಕ್ಸ್ ಘಟಕ, ಸರಕಾರದ ಮುಖ್ಯ ಕಾರ್ಯದರ್ಶಿ, ತಹಶೀಲ್ದಾರ್, ಜಿಲ್ಲಾಧಿಕಾರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನಡ ಗ್ರಾ.ಪಂ ಪಿಡಿಒ ಅವರಿಗೆ ನೋಟೀಸು ಜಾರಿ ಮಾಡಿದೆ ಎಂದು ವರದಿಯಾಗಿದೆ.

Related posts

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!