September 6, 2026
ಅಪರಾಧ ಸುದ್ದಿ

ಅಂಡಿಂಜೆ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ಸ್ಕಿಡ್ ಆಗಿ ಮಗುಚಿ ಬಿದ್ದ ದ್ವಿಚಕ್ರ ವಾಹನ : ಸವಾರ ಕೊಕ್ರಾಡಿ ಗ್ರಾಮದ ಸುಂದರ ಶೆಟ್ಟಿ ಮೃತ್ಯು

ಅಂಡಿಂಜೆ: ಅಂಡಿಂಜೆ ಗ್ರಾಮದ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ದ್ವಿಚಕ್ರ ಸ್ಕಿಡ್ ಆಗಿ ಮಗುಚಿ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಡಿ.28 ರಂದು ವರದಿಯಾಗಿದೆ.

ಕೊಕ್ರಾಡಿ ಗ್ರಾಮದಆದರ್ಶ ನಗರ ನಿವಾಸಿ ಸುಂದರ ಶೆಟ್ಟಿ, (66 ವರ್ಷ) ಈ ದುಘ೯ಟನೆಯಲ್ಲಿ ಮೃತಪಟ್ಟವರು.

ಘಟನೆ ಹಿನ್ನೆಲೆ:
ಡಿ. 28ರಂದು ಸಂಜೆ ಸುಮಾರು 5:45ಕ್ಕೆ ಅಂಡಿಂಜೆ ಗ್ರಾಮದ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ವೇಣೂರು- ನಾರಾವಿ ಸಾರ್ವಜನಿಕ ಡಾಮಾರು ರಸ್ತೆಯ ಸ್ವಲ್ಪ ಇಳಿಜಾರು ರಸ್ತೆಯಲ್ಲಿ ದ್ವಿಚಕ್ರ ವಾಹನವನ್ನು ಅದರ ಸವಾರ ಸುಂದರ ಶೆಟ್ಟಿ ಎಂಬವರು ವೇಣೂರು ಕಡೆಯಿಂದ ನಾರಾವಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿದ ಪರಿಣಾಮ ಚಾಲಕನ ಹತೋಟಿ ತಪ್ಪಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಸವಾರ ಸುಂದರ ಶೆಟ್ಟಿ ವಾಹನದೊಂದಿಗೆ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ರೋಶನ್ ಮತ್ತಿತರರು ಸೇರಿ ಚಿಕಿತ್ಸೆಯ ಬಗ್ಗೆ ಮೂಡಬಿದ್ರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅವರು ದಾರಿ ಮಧ್ಯೆ ಮೃತ ಪಟ್ಟರೆನ್ನಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ

Suddi Udaya

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!