23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಅಂಡಿಂಜೆ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ಸ್ಕಿಡ್ ಆಗಿ ಮಗುಚಿ ಬಿದ್ದ ದ್ವಿಚಕ್ರ ವಾಹನ : ಸವಾರ ಕೊಕ್ರಾಡಿ ಗ್ರಾಮದ ಸುಂದರ ಶೆಟ್ಟಿ ಮೃತ್ಯು

ಅಂಡಿಂಜೆ: ಅಂಡಿಂಜೆ ಗ್ರಾಮದ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ದ್ವಿಚಕ್ರ ಸ್ಕಿಡ್ ಆಗಿ ಮಗುಚಿ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಡಿ.28 ರಂದು ವರದಿಯಾಗಿದೆ.

ಕೊಕ್ರಾಡಿ ಗ್ರಾಮದಆದರ್ಶ ನಗರ ನಿವಾಸಿ ಸುಂದರ ಶೆಟ್ಟಿ, (66 ವರ್ಷ) ಈ ದುಘ೯ಟನೆಯಲ್ಲಿ ಮೃತಪಟ್ಟವರು.

ಘಟನೆ ಹಿನ್ನೆಲೆ:
ಡಿ. 28ರಂದು ಸಂಜೆ ಸುಮಾರು 5:45ಕ್ಕೆ ಅಂಡಿಂಜೆ ಗ್ರಾಮದ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ವೇಣೂರು- ನಾರಾವಿ ಸಾರ್ವಜನಿಕ ಡಾಮಾರು ರಸ್ತೆಯ ಸ್ವಲ್ಪ ಇಳಿಜಾರು ರಸ್ತೆಯಲ್ಲಿ ದ್ವಿಚಕ್ರ ವಾಹನವನ್ನು ಅದರ ಸವಾರ ಸುಂದರ ಶೆಟ್ಟಿ ಎಂಬವರು ವೇಣೂರು ಕಡೆಯಿಂದ ನಾರಾವಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿದ ಪರಿಣಾಮ ಚಾಲಕನ ಹತೋಟಿ ತಪ್ಪಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಸವಾರ ಸುಂದರ ಶೆಟ್ಟಿ ವಾಹನದೊಂದಿಗೆ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ರೋಶನ್ ಮತ್ತಿತರರು ಸೇರಿ ಚಿಕಿತ್ಸೆಯ ಬಗ್ಗೆ ಮೂಡಬಿದ್ರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅವರು ದಾರಿ ಮಧ್ಯೆ ಮೃತ ಪಟ್ಟರೆನ್ನಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya
error: Content is protected !!