July 23, 2026
ಅಪರಾಧ ಸುದ್ದಿ

ಅಂಡಿಂಜೆ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ಸ್ಕಿಡ್ ಆಗಿ ಮಗುಚಿ ಬಿದ್ದ ದ್ವಿಚಕ್ರ ವಾಹನ : ಸವಾರ ಕೊಕ್ರಾಡಿ ಗ್ರಾಮದ ಸುಂದರ ಶೆಟ್ಟಿ ಮೃತ್ಯು

ಅಂಡಿಂಜೆ: ಅಂಡಿಂಜೆ ಗ್ರಾಮದ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ದ್ವಿಚಕ್ರ ಸ್ಕಿಡ್ ಆಗಿ ಮಗುಚಿ ಬಿದ್ದು ಸವಾರ ಸಾವನ್ನಪ್ಪಿದ ಘಟನೆ ಡಿ.28 ರಂದು ವರದಿಯಾಗಿದೆ.

ಕೊಕ್ರಾಡಿ ಗ್ರಾಮದಆದರ್ಶ ನಗರ ನಿವಾಸಿ ಸುಂದರ ಶೆಟ್ಟಿ, (66 ವರ್ಷ) ಈ ದುಘ೯ಟನೆಯಲ್ಲಿ ಮೃತಪಟ್ಟವರು.

ಘಟನೆ ಹಿನ್ನೆಲೆ:
ಡಿ. 28ರಂದು ಸಂಜೆ ಸುಮಾರು 5:45ಕ್ಕೆ ಅಂಡಿಂಜೆ ಗ್ರಾಮದ ಶ್ರೀವಿನಾಯಕ ಶ್ರೀರಾಮ ಭಜನಾ ಮಂದಿರದ ಬಳಿ ವೇಣೂರು- ನಾರಾವಿ ಸಾರ್ವಜನಿಕ ಡಾಮಾರು ರಸ್ತೆಯ ಸ್ವಲ್ಪ ಇಳಿಜಾರು ರಸ್ತೆಯಲ್ಲಿ ದ್ವಿಚಕ್ರ ವಾಹನವನ್ನು ಅದರ ಸವಾರ ಸುಂದರ ಶೆಟ್ಟಿ ಎಂಬವರು ವೇಣೂರು ಕಡೆಯಿಂದ ನಾರಾವಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿದ ಪರಿಣಾಮ ಚಾಲಕನ ಹತೋಟಿ ತಪ್ಪಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಸವಾರ ಸುಂದರ ಶೆಟ್ಟಿ ವಾಹನದೊಂದಿಗೆ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ತೀವ್ರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ರೋಶನ್ ಮತ್ತಿತರರು ಸೇರಿ ಚಿಕಿತ್ಸೆಯ ಬಗ್ಗೆ ಮೂಡಬಿದ್ರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅವರು ದಾರಿ ಮಧ್ಯೆ ಮೃತ ಪಟ್ಟರೆನ್ನಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಮೊಬೈಲ್ ಸಂಭಾಷಣೆಯನ್ನು ಅನಧಿಕೃತವಾಗಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಬಗ್ಗೆ ದೂರು

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya
error: Content is protected !!