ಗುರುವಾಯನಕೆರೆ: ಪದವಿ ಪೂರ್ವ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಬಳಿಯಲ್ಲಿ ನೂತನವಾಗಿರೂ. 15 ಲಕ್ಷ ಲೀಟರ್ ಸಾಮರ್ಥ್ಯದ ಕೊಳಚೆ ನೀರಿ ಸಂಸ್ಕರಣಾ ಘಟಕ( ಎಸ್ ಟಿ ಪಿ) ರಚನೆಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.
ಎಕ್ಸೆಲ್ ನ ಹಲವು ವಿದ್ಯಾರ್ಥಿಗಳು ರಾಷ್ಟ್ರದ ಅತ್ಯುನ್ನತ ಮಟ್ಟದ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ ಏಮ್ಸ್, ಜಿಪ್ಮಾರ್ ಹಾಗೂ ಅತ್ಯುನ್ನತ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಐಟಿ, ಎನ್ ಐಐಟಿ ಗಳಂಥ ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆದ ಕಾರಣ ಸಹಜವಾಗಿ ರಾಷ್ಟ್ರಮಟ್ಟದಲ್ಲಿ ಸಾವಿರಾರು ವಿದ್ಯಾರ್ಥಿಗಳು ಎಕ್ಸೆಲ್ ನಲ್ಲಿ ಪಿಯುಸಿ ಶಿಕ್ಷಣ ಪಡೆಯಲು ಹಾತೊರೆಯುತ್ತಿದ್ದಾರೆ.
ಗುಣ ಮಟ್ಟದ ಶಿಕ್ಷಣ, ಆಧುನಿಕ ವ್ಯವಸ್ಥೆಗಳಿರುವ ವಸತಿ ವ್ಯವಸ್ಥೆ, ಪೌಷ್ಟಿಕಾಂಶವುಳ್ಳ ಊಟೋಪಚಾರ, ಶಿಸ್ತು – ಸಭ್ಯ – ಸಂಸ್ಕಾರಗಳಿರುವ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನೂತನ ಎಸ್ ಟಿ ಪಿ ಘಟಕವನ್ನು ಶೀಘ್ರದಲ್ಲಿ ಕಾಮಗಾರಿ ಮುಗಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ತಿಳಿಸಿದ್ದಾರೆ.











