27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

ಗುರುವಾಯನಕೆರೆ: ಪದವಿ ಪೂರ್ವ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಬಳಿಯಲ್ಲಿ ನೂತನವಾಗಿರೂ. 15 ಲಕ್ಷ ಲೀಟರ್ ಸಾಮರ್ಥ್ಯದ ಕೊಳಚೆ ನೀರಿ ಸಂಸ್ಕರಣಾ ಘಟಕ( ಎಸ್ ಟಿ ಪಿ) ರಚನೆಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.

ಎಕ್ಸೆಲ್ ನ ಹಲವು ವಿದ್ಯಾರ್ಥಿಗಳು ರಾಷ್ಟ್ರದ ಅತ್ಯುನ್ನತ ಮಟ್ಟದ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ ಏಮ್ಸ್, ಜಿಪ್ಮಾರ್ ಹಾಗೂ ಅತ್ಯುನ್ನತ ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಐಟಿ, ಎನ್ ಐಐಟಿ ಗಳಂಥ ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆದ ಕಾರಣ ಸಹಜವಾಗಿ ರಾಷ್ಟ್ರಮಟ್ಟದಲ್ಲಿ ಸಾವಿರಾರು ವಿದ್ಯಾರ್ಥಿಗಳು ಎಕ್ಸೆಲ್ ನಲ್ಲಿ ಪಿಯುಸಿ ಶಿಕ್ಷಣ ಪಡೆಯಲು ಹಾತೊರೆಯುತ್ತಿದ್ದಾರೆ.

ಗುಣ ಮಟ್ಟದ ಶಿಕ್ಷಣ, ಆಧುನಿಕ ವ್ಯವಸ್ಥೆಗಳಿರುವ ವಸತಿ ವ್ಯವಸ್ಥೆ, ಪೌಷ್ಟಿಕಾಂಶವುಳ್ಳ ಊಟೋಪಚಾರ, ಶಿಸ್ತು – ಸಭ್ಯ – ಸಂಸ್ಕಾರಗಳಿರುವ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ನೂತನ ಎಸ್ ಟಿ ಪಿ ಘಟಕವನ್ನು ಶೀಘ್ರದಲ್ಲಿ ಕಾಮಗಾರಿ ಮುಗಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ಬಳಂಜ ಶಾಲೆಗೆ ಹಳೆವಿದ್ಯಾರ್ಥಿಗಳಿಂದ ಎರಡು ಟಿವಿ ಕೊಡುಗೆ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya
error: Content is protected !!