July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.11: “ಆಸರೆ” ಸ್ಕಾಲರ್ ಶಿಪ್ ಪರೀಕ್ಷೆ , ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅವಕಾಶ : ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಪಿಯುಸಿ ಶಿಕ್ಷಣಕ್ಕೆ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಉಚಿತ ದಾಖಲಾತಿ

ಬೆಳ್ತಂಗಡಿ: ವಿದ್ಯಾದಾನ ಶ್ರೇಷ್ಠ ದಾನ ಎಂಬ ಮಾತಿದೆ. ಅದರಂತೆ ಬೆಳ್ತಂಗಡಿ ತಾಲೂಕಿನ ವೇಣೂರು ಸನಿಹದ ನಿಟ್ಟಡೆಯಲ್ಲಿರುವ ಕುಂಭಶ್ರೀ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆ ಈವರೆಗೆ ನೂರಾರು ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಒದಗಿಸುತ್ತಾ ಬಂದಿದೆ. 12 ಮಕ್ಕಳಿಂದ ಆರಂಭವಾಗಿದ್ದ ಶಾಲೆ ಇಂದು 850ಕ್ಕೂ ಅಧಿಕ ಮಕ್ಕಳು ವಿದ್ಯಾರ್ಜನೆ ಪಡೆಯುತ್ತಿದ್ದಾರೆ. ಎಲ್ ಕೆಜಿಯಿಂದ ಹತ್ತನೇ ತರಗತಿ ಮತ್ತು ಪಿಯುಸಿ ಕಾಲೇಜು ಶಿಕ್ಷಣ ನೀಡಲಾಗುತ್ತಿದೆ. ಗುರುಕುಲ ಪದ್ಧತಿಯಲ್ಲಿ ನೀಡುವ ಶಿಕ್ಷಣ ಮತ್ತು ಸತತ 12ನೇ ಬಾರಿ ಎಸ್ಎಸ್ಎಲ್ ಸಿಯಲ್ಲಿ ಹಾಗೂ ಸತತ 4ನೇ ಬಾರಿ ಪಿಯುಸಿಯಲ್ಲಿ ಶೇ. 100 ಫಲಿತಾಂಶವನ್ನು ಗುರುತಿಸಿ ಸಂಸ್ಥೆಗೆ ರಾಜ್ಯ, ರಾಷ್ಟ್ರಮಟ್ಟದ ಪ್ರಶಸ್ತಿಗಳು ಲಭಿಸಿರುವುದು ಹಾಗೂ ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಅಚ್ಚಾಗಿ ದಾಖಲೆ ನಿರ್ಮಿಸಿದೆ ಎಂದು ಕುಂಭ ಶ್ರೀ ಶಾಲಾ ಸಂಚಾಲಕ ಅಶ್ವಿತ್ ಕುಲಾಲ್ ಹೇಳಿದರು.

ಅವರು ಡಿ 29ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಜನವರಿ 11ರಂದು ಆಸರೆ ಸ್ಕಾಲರ್‌ಶಿಪ್ ಟೆಸ್ಟ್: ಪ್ರತೀ ವರ್ಷ ಅತ್ಯಧಿಕ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿರುವ ಸಂಸ್ಥೆ ಈಗ ವಿದ್ಯಾರ್ಥಿಗಳ ಅಭಿರುಚಿಗೆ ತಕ್ಕಂತೆ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಕುಂಭಶ್ರೀ ವಿದ್ಯಾಸಂಸ್ಥೆಯು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಆಸರೆ ಎಂಬ ಸ್ಕಾಲರ್‌ಶಿಪ್ ಟೆಸ್ಟ್ (ವಿದ್ಯಾರ್ಥಿವೇತನ ಪರೀಕ್ಷೆ) ಎಂಬ ಪರೀಕ್ಷೆಯನ್ನು ಆಯೋಜಿಸಿದ್ದು, ಇದರಲ್ಲಿ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಪಿಯುಸಿ ಶಿಕ್ಷಣಕ್ಕೆ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಉಚಿತ ದಾಖಲಾತಿ ಮಾಡಿಕೊಳ್ಳಲಾಗುತ್ತದೆ. ಅಲ್ಲದೆ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸುವ ವಿದ್ಯಾರ್ಥಿಗಳಿಗೆ ವಿಶೇಷವಾಗಿ ನಗದು ಮತ್ತು ಪಾರಿತೋಷಕ ನೀಡುಲಾಗುತ್ತದೆ.

11-01-2026ರಂದು ಈ ಆಸರೆ ಸ್ಕಾಲರ್‌ಶಿಪ್ ಟೆಸ್ಟ್ ನಡೆಯಲಿದ್ದು, ಪರೀಕ್ಷಾ ಅವಧಿ 1.30 ಗಂಟೆ ಇರುತ್ತದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಇಂಗ್ಲೀಷ್ ಅಥವಾ ಕನ್ನಡದಲ್ಲೂ ಬರೆಯಲು ಅವಕಾಶವಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಚಂದ್ರಶೇಖರ್,ಪದವಿ ಪೂರ್ವ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ಶಾಲಾ ಮುಖ್ಯೋಪಾಧ್ಯಾಯಿನಿ ಶುಭ ನಿತೇಶ್,ಉಪ ಮುಖ್ಯೋಪಾಧ್ಯಾಯಿನಿ ಅಕ್ಷತಾ, ಪದ್ಮನಾಭ ಕುಲಾಲ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಕ್ರೀಡಾ ಸಾಮಗ್ರಿ ವಿತರಣೆ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!