25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬುರುಡೆ ಪ್ರಕರಣ ವರದಿಯ ಆದೇಶ ಮತ್ತೆ ಜ.3ಕ್ಕೆ ಮುಂದೂಡಿದ ಕೋರ್ಟ್

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ವರದಿಯನ್ನು ಸಲ್ಲಿಸಿದ ಆದೇಶವನ್ನು ಡಿ.26 ಕ್ಕೆ ನಿಗದಿಪಡಿಸಲಾಗಿತ್ತು. ಆದ್ರೆ ಆದೇಶವನ್ನು ಡಿ.29 ಕ್ಕೆ ಮುಂದೂಡಿತ್ತು ಇದೀಗ ಮತ್ತೆ ಆದೇಶವನ್ನು ಜ.3 ಕ್ಕೆ ಬೆಳ್ತಂಗಡಿ ನ್ಯಾಯಾಲಯ ಮುಂದೂಡಿದೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20 ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು (u/s)215 ಅಡಿಯಲ್ಲಿ ಚಿನ್ನಯ್ಯ , ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತ ಭಟ್ ವಿರುದ್ಧ ದೂರು ಸಲ್ಲಿಸಿದ್ದರು.

ಈ ವರದಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಹೆಚ್.ಟಿ ಅವರು ವಿಚಾರಣೆ ನಡೆಸಿ ಡಿ.26 ರಂದು ಆದೇಶದಿಂದ ಡಿ.29 ಕ್ಕೆ ಮುಂದೂಡಿತ್ತು. ಮತ್ತೆ ಇದೀಗ ಜ.3 ಕ್ಕೆ ಆದೇಶವನ್ನು ಮುಂದೂಡಿದೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಲೋಕೇಶ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

Related posts

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಮಹಾರಥೋತ್ಸವ: ಅರುಣ್ ಕುಮಾರ್ ಪುತ್ತಿಲ ಭಾಗಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya
error: Content is protected !!