September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ಮನೆಗೆ ವಾಪಾಸು ಹಿಂದಿರುಗದೆ ಕಾಣೆಯಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ಪುರುಷರಬೆಟ್ಟು ಎಂಬಲ್ಲಿ ಡಿ.27 ರಂದು ನಡೆದಿದೆ.

ಕಾಣೆಯಾದ ವ್ಯಕ್ತಿ ಜಿನ್ನಪ್ಪ ಗೌಡರ ಹಿರಿಯ ಪುತ್ರ ರಾಜೇಶ್ ಪಿ. (30ವ) ಅವರು ಒಂದು ವರ್ಷದ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು, ಬಳಿಕ ವಾಪಾಸು ಊರಿಗೆ ಬಂದು ಕೆಲಸವಿಲ್ಲದೆ ತಂದೆ-ತಾಯಿಯ ಜೊತೆಗೆ ಮನೆಯಲ್ಲಿ ವಾಸವಿದ್ದರು, ಡಿ. 27 ರಂದು ಅವರ ತಮ್ಮ ಪ್ರಶಾಂತ್ ಪಿ ಅವರು ರಜೆಯ ಕಾರಣ ಮನೆಗೆ ಬಂದಾಗ ಅಣ್ಣ ರಾಜೇಶ್ ಕಾಣದಿರುವುದನ್ನು ತಾಯಿಯಲ್ಲಿ ವಿಚಾರಿಸಿದಾಗ ಅವನು ಬೆಳಿಗ್ಗೆ 10:00 ಗಂಟೆಗೆ ಮನೆಯಿಂದ ಹೊರಗೆ ಹೋದವನು ವಾಪಾಸು ಬಂದಿರುವುದಿಲ್ಲವಾಗಿ ತಿಳಿಸಿದರು. ಅವರ ಮೊಬೈಲ್‌ಗೆ ಕರೆ ಮಾಡಿದರೆ ಕರೆಯನ್ನು ಸ್ವೀಕರಿಸುತ್ತಿರಲಿಲ್ಲ, ನೆರೆ ಮನೆ, ಸಂಬಂಧಿಕರಿಗೆ ವಿಚಾರ ತಿಳಿಸಿ ಮನೆಯ ವಠಾರದಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ, ರಾತ್ರಿ ಸಮಯ ಮನೆಗೆ ಬರಬಹುದೆಂದು ಕಾದು ನೋಡಿದರೂ ಈವರೆಗೆ ವಾಪಾಸು ಮನೆಗೆ ಬಾರದೇ ಇರುವುದರ ಕುರಿತು ಅವರನ್ನು ಪತ್ತೆ ಹಚ್ಚಿಕೊಡಬೇಕು ಎಂದು ತಮ್ಮ ಪ್ರಶಾಂತ್ ಪಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.

ಸಾಧರಣ ಶರೀರ, 5.6 ಅಡಿ ಎತ್ತರ, ಕಪ್ಪು ಬಣ್ಣದ ಉದ್ದ ತೋಳಿನ ಶರ್ಟ್ ಹಾಗೂ ಬರ್ಮುಡ ಧರಿಸಿದ್ದು ತುಳು, ಕನ್ನಡ, ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ.೮೨/೨೫ ಕಲಂ ಅಡಿ ಮನುಷ್ಯ ಕಾಣೆಯಾಂತೆ ದೂರು ದಾಖಲಾಗಿದೆ.

Related posts

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!