22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ಮನೆಗೆ ವಾಪಾಸು ಹಿಂದಿರುಗದೆ ಕಾಣೆಯಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ಪುರುಷರಬೆಟ್ಟು ಎಂಬಲ್ಲಿ ಡಿ.27 ರಂದು ನಡೆದಿದೆ.

ಕಾಣೆಯಾದ ವ್ಯಕ್ತಿ ಜಿನ್ನಪ್ಪ ಗೌಡರ ಹಿರಿಯ ಪುತ್ರ ರಾಜೇಶ್ ಪಿ. (30ವ) ಅವರು ಒಂದು ವರ್ಷದ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು, ಬಳಿಕ ವಾಪಾಸು ಊರಿಗೆ ಬಂದು ಕೆಲಸವಿಲ್ಲದೆ ತಂದೆ-ತಾಯಿಯ ಜೊತೆಗೆ ಮನೆಯಲ್ಲಿ ವಾಸವಿದ್ದರು, ಡಿ. 27 ರಂದು ಅವರ ತಮ್ಮ ಪ್ರಶಾಂತ್ ಪಿ ಅವರು ರಜೆಯ ಕಾರಣ ಮನೆಗೆ ಬಂದಾಗ ಅಣ್ಣ ರಾಜೇಶ್ ಕಾಣದಿರುವುದನ್ನು ತಾಯಿಯಲ್ಲಿ ವಿಚಾರಿಸಿದಾಗ ಅವನು ಬೆಳಿಗ್ಗೆ 10:00 ಗಂಟೆಗೆ ಮನೆಯಿಂದ ಹೊರಗೆ ಹೋದವನು ವಾಪಾಸು ಬಂದಿರುವುದಿಲ್ಲವಾಗಿ ತಿಳಿಸಿದರು. ಅವರ ಮೊಬೈಲ್‌ಗೆ ಕರೆ ಮಾಡಿದರೆ ಕರೆಯನ್ನು ಸ್ವೀಕರಿಸುತ್ತಿರಲಿಲ್ಲ, ನೆರೆ ಮನೆ, ಸಂಬಂಧಿಕರಿಗೆ ವಿಚಾರ ತಿಳಿಸಿ ಮನೆಯ ವಠಾರದಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ, ರಾತ್ರಿ ಸಮಯ ಮನೆಗೆ ಬರಬಹುದೆಂದು ಕಾದು ನೋಡಿದರೂ ಈವರೆಗೆ ವಾಪಾಸು ಮನೆಗೆ ಬಾರದೇ ಇರುವುದರ ಕುರಿತು ಅವರನ್ನು ಪತ್ತೆ ಹಚ್ಚಿಕೊಡಬೇಕು ಎಂದು ತಮ್ಮ ಪ್ರಶಾಂತ್ ಪಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.

ಸಾಧರಣ ಶರೀರ, 5.6 ಅಡಿ ಎತ್ತರ, ಕಪ್ಪು ಬಣ್ಣದ ಉದ್ದ ತೋಳಿನ ಶರ್ಟ್ ಹಾಗೂ ಬರ್ಮುಡ ಧರಿಸಿದ್ದು ತುಳು, ಕನ್ನಡ, ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ.೮೨/೨೫ ಕಲಂ ಅಡಿ ಮನುಷ್ಯ ಕಾಣೆಯಾಂತೆ ದೂರು ದಾಖಲಾಗಿದೆ.

Related posts

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Suddi Udaya

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

Suddi Udaya
error: Content is protected !!