23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

ಬೆಳ್ತಂಗಡಿ: ಡಿ.27 ರಿಂದ ಜ. 1 ರವರೆಗೆ 7 ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ 29 ನೇ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್‌ ಅಕ್ಕಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಸಾದ ರೂಪದಲ್ಲಿ ನೀಡಿ ಜಾಂಬೋರೇಟ್ ಗೆ ಶುಭ ಹಾರೈಸಿದ್ದಾರೆ.

ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ.ಹರ್ಷೆಂದ್ರ ಕುಮಾರ್‌ ಇವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಿಂದ ಕಳುಹಿಸಿಕೊಡಲಾಯಿತು. ಅಕ್ಕಿಯನ್ನು ಕಳುಹಿಸುವ ಸಂದರ್ಭದಲ್ಲಿ ಭಾರತ್‌ ಸ್ಸ್ಕೌಟ್ಸ್‌ & ಗೈಡ್ಸ್‌, ಬೆಳ್ತಂಗಡಿ ಸ್ಧಳೀಯ‌ ಸಂಸ್ದೆಯ ಕಾರ್ಯದರ್ಶಿ ಪ್ರಮೀಳಾ , ಜಿಲ್ಲಾ ಸಹಾಯಕ ಆಯುಕ್ತರಾದ ಬಿ ಸೋಮಶೇಖರ ಶೆಟ್ಟಿ ಮತ್ತು ಅನ್ನಪೂರ್ಣ ಛತ್ರದ ನಿರ್ವಹಣಾಧಿಕಾರಿಯಾದ ಜಿ ಸುಬ್ರಮಣ್ಯ ಪ್ರಸಾದ್‌ ಹಸಿರು ನಿಶಾನೆ ತೋರಿಸಿ ಪ್ರಯಾಣಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅನ್ನಪೂರ್ಣ ಛತ್ರದ ಭರತ್‌ರಾಜ್‌ ಜೈನ್‌, ಎಸ್.ಡಿ.ಎಂ.ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ರಾಜೇಶ ಬಿ, ರೋವರ್‌ ಸ್ಕೌಟ್‌ ಲೀಡರ್‌ ಲಕ್ಷ್ಮೀಶ ಭಟ್ಟ,ರೋವರ್ ಸರ್ವೇಶ್‌ ಜೈನ್‌, ತೇಜಸ್ವಿ ಹೆಗಡೆ ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಕೊನೆಹಾಡುವಂತೆ ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
error: Content is protected !!