25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

ಬೆಳ್ತಂಗಡಿ: ಡಿ.27 ರಿಂದ ಜ. 1 ರವರೆಗೆ 7 ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ 29 ನೇ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್‌ ಅಕ್ಕಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಸಾದ ರೂಪದಲ್ಲಿ ನೀಡಿ ಜಾಂಬೋರೇಟ್ ಗೆ ಶುಭ ಹಾರೈಸಿದ್ದಾರೆ.

ಎಸ್.ಡಿ.ಎಮ್. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ.ಹರ್ಷೆಂದ್ರ ಕುಮಾರ್‌ ಇವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಿಂದ ಕಳುಹಿಸಿಕೊಡಲಾಯಿತು. ಅಕ್ಕಿಯನ್ನು ಕಳುಹಿಸುವ ಸಂದರ್ಭದಲ್ಲಿ ಭಾರತ್‌ ಸ್ಸ್ಕೌಟ್ಸ್‌ & ಗೈಡ್ಸ್‌, ಬೆಳ್ತಂಗಡಿ ಸ್ಧಳೀಯ‌ ಸಂಸ್ದೆಯ ಕಾರ್ಯದರ್ಶಿ ಪ್ರಮೀಳಾ , ಜಿಲ್ಲಾ ಸಹಾಯಕ ಆಯುಕ್ತರಾದ ಬಿ ಸೋಮಶೇಖರ ಶೆಟ್ಟಿ ಮತ್ತು ಅನ್ನಪೂರ್ಣ ಛತ್ರದ ನಿರ್ವಹಣಾಧಿಕಾರಿಯಾದ ಜಿ ಸುಬ್ರಮಣ್ಯ ಪ್ರಸಾದ್‌ ಹಸಿರು ನಿಶಾನೆ ತೋರಿಸಿ ಪ್ರಯಾಣಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅನ್ನಪೂರ್ಣ ಛತ್ರದ ಭರತ್‌ರಾಜ್‌ ಜೈನ್‌, ಎಸ್.ಡಿ.ಎಂ.ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ರಾಜೇಶ ಬಿ, ರೋವರ್‌ ಸ್ಕೌಟ್‌ ಲೀಡರ್‌ ಲಕ್ಷ್ಮೀಶ ಭಟ್ಟ,ರೋವರ್ ಸರ್ವೇಶ್‌ ಜೈನ್‌, ತೇಜಸ್ವಿ ಹೆಗಡೆ ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ಆಪೆ ರಿಕ್ಷಾ ಡಿಕ್ಕಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!