September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನಲ್ಲಿ ಕ್ರಿಸ್ಮಸ್ ಸೌಹಾರ್ದ ಕೂಟ

ವೇಣೂ: ಯೇಸು ಸ್ವಾಮಿ ಬೋಧಿಸಿದ ಪ್ರೀತಿ, ಕರುಣೆ ,ಕ್ಷಮೆಮತ್ತು ಮಾನವೀಯತೆಯನ್ನುನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ವೇಣೂರು ಚರ್ಚಿನ ಧರ್ಮಗುರುಗಳಾದ ವಂ।ಸ್ವಾಮಿ ಎಡ್ವಿನ್ ಸಂತೋಷ್ ಮೋನಿಸ್ ಹೇಳಿದರು.

ಅವರು ವೇಣೂರಿನಲ್ಲಿ ಜರಗಿದ ಕ್ರಿಸ್ಮಸ್ ಸೌಹಾರ್ದ ಕೂಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ್ದರು.ಮುಖ್ಯ ಅತಿಥಿಗಳಾಗಿ ಖ್ಯಾತ ಚಿಂತಕ ಅರವಿಂದ ಚೊಕ್ಕಾಡಿ, ಖತೀಬರಾದ ಜ।ಮುಹಮ್ಮದ್ ಔಹರ್ ಅಹ್ ಹನಿ, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಕಾಶಿನಾಥ್, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಧಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಮ ಶೆಟ್ಟಿ ಭಾಗವಹಿಸಿದ್ದರು.

ಚರ್ಚ್ ಉಪಾಧ್ಯಕ್ಷ ಡೆನಿಸ್ ಸಿಕ್ವೇರ ಸ್ವಾಗತಿಸಿದರು.ಕಾರ್ಯದರ್ಶಿ ಶ್ರೀಮತಿ ಜೆತ್ರುದ್ ಡಿ ಸೋಜ ವಂದಿಸಿದರು. ಶಿಕ್ಷಕ ವಿನೋದ್ ಮೋನಿಸ್ ನಿರ್ವಹಿಸಿದರು. ವಿವಿಧ ಧರ್ಮಗಳ ಗಣ್ಯರು ಉಪಸ್ಥಿತರಿದ್ದರು. ಸ್ಥಳೀಯ ಕೆಥೋಲಿಕ್ ಸಭಾ ಅಧ್ಯಕ್ಷ ಅರುಣ್ ಡಿ ಸೋಜ, ಐಸಿವೈಎಂ ಅಧ್ಯಕ್ಷೆ ಕು।ಜೆಸ್ವಿನ್ ಲೋಬೊ, ಚರ್ಚಿನ ಮಾಜಿ ಉಪಾಧ್ಯಕ್ಷರಾದ ಎಲ್ ಜೆ ಫೆರ್ನಾಂಡಿಸ್ ಮತ್ತು ತೋಮಸ್ ರೆಮಿ ನೊರೋನ್ಹ ಸಹಕರಿಸಿದರು.
ವರದಿ: ಹೆಚ್ ಮಹಮ್ಮದ್

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

Suddi Udaya
error: Content is protected !!