September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

ಬೆಳ್ತಂಗಡಿ : ಒಂದು ಕಡೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಕಾನೂನಿನ ಹೆಸರಿನಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿದ್ದರೆ, ಇನ್ನೊಂದೆಡೆ ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದೆ. ಈ ಎರಡೂ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಹಿಂದೂ ಜನಜಾಗೃತಿ ಸಮಿತಿಯು, ಹಿಂದೂ ಸಮಾಜದ ರಕ್ಷಣೆಗಾಗಿ ರಾಜ್ಯದ ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರಗಳು ತಕ್ಷಣವೇ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದೆ.

ಅಸಂವಿಧಾನಿಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ ಕಾಯ್ದೆಗೆ ಅನುಮತಿ ನೀಡಬಾರದು ಹಾಗೂ ಬಾಂಗ್ಲಾ ಹಿಂದೂ ಅಲ್ಪ ಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲಿಸಲು ಭಾರತ ಸರಕಾರದಿಂದ ಕಠಿಣ ರಾಜಕೀಯ ಹಸ್ತಕ್ಷೇಪ ಹಾಗೂ ಅಂತಾರಾಷ್ಟ್ರೀಯ ಒತ್ತಡ ಹೇರುವಂತೆ ಆಗ್ರಹಿಸಿ ಬೆಳ್ತಂಗಡಿ ತಹಶೀಲ್ದಾರಾದ ಪೃಥ್ವಿ ಸಾನಿಕಂ ಇವರ ಮೂಲಕ ರಾಜ್ಯಪಾಲರಿಗೆ ಮತ್ತು ಪ್ರಧಾನಿಯವರಿಗೆ ಮನವಿಯನ್ನು ನೀಡಲಾಯಿತು.


ಹಿಂದೂ ಸಮಾಜದ ಅಸ್ತಿತ್ವಕ್ಕೆ ಧಕ್ಕೆ ತರುತ್ತಿರುವ ವಿಚಾರಗಳಲ್ಲಿ ಸರ್ಕಾರಗಳು ವಿಫಲವಾದರೆ ಹಿಂದೂ ಸಮಾಜವು ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯು ಎಚ್ಚರಿಸಿದೆ.

ಈ ಸಂದರ್ಭದಲ್ಲಿ ಧರ್ಮ ಪ್ರೇಮಿಗಳಾದ ಯಶವಂತ ಗೌಡ ಪಂಚಾಯತಿ ಅಧ್ಯಕ್ಷರು ಕೊಯ್ಯೂರು, ಉಮಾ ರಾವ್ ಮಹಿಳಾ ಒಕ್ಕೂಟ ಅಧ್ಯಕ್ಷರು ಬೆಳ್ತಂಗಡಿ, ಕೇಶವ ಅಚ್ಚಿನಡ್ಕ, ರಾಜೇಂದ್ರ ಜಿ ಕಾನರ್ಪ, ಮೋಹನ್ ಬೈರಾ ಪುತ್ರಬೈಲು, ವಸಂತ ಕಲ್ಲಾಜೆ, ಶಾಂತ ಉಜಿರೆ, ಸಂತೋಷ್ ಪನೇಜಾಲ್, ವಿನೋದ ಉಜಿರೆ, ವಸಂತ ಗುರುವಾಯನಕೆರೆ, ಶಾರದಾ ಭಂಡಾರಕರ್, ಯೋಗೀಶ್ ಕೆಂಬರ್ಜೆ, ಯಂ ಹರೀಶ್ ಜಿ ಮುದ್ದಿನಡ್ಕ ಮುಂತಾದವರು ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಯಶಸ್ವಿಗೊಳಿಸಲು ಬೆಳ್ತಂಗಡಿಯಲ್ಲಿ ಶ್ರಮಿಕ ಸೇವಾ ಟ್ರಸ್ಟ್ ನಿಂದ ಪೂರ್ವಭಾವಿ ಕಾರ್ಯಾಗಾರ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!