25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

ಬೆಳ್ತಂಗಡಿ : ಒಂದು ಕಡೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಕಾನೂನಿನ ಹೆಸರಿನಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿದ್ದರೆ, ಇನ್ನೊಂದೆಡೆ ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದೆ. ಈ ಎರಡೂ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಹಿಂದೂ ಜನಜಾಗೃತಿ ಸಮಿತಿಯು, ಹಿಂದೂ ಸಮಾಜದ ರಕ್ಷಣೆಗಾಗಿ ರಾಜ್ಯದ ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರಗಳು ತಕ್ಷಣವೇ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದೆ.

ಅಸಂವಿಧಾನಿಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ ಕಾಯ್ದೆಗೆ ಅನುಮತಿ ನೀಡಬಾರದು ಹಾಗೂ ಬಾಂಗ್ಲಾ ಹಿಂದೂ ಅಲ್ಪ ಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲಿಸಲು ಭಾರತ ಸರಕಾರದಿಂದ ಕಠಿಣ ರಾಜಕೀಯ ಹಸ್ತಕ್ಷೇಪ ಹಾಗೂ ಅಂತಾರಾಷ್ಟ್ರೀಯ ಒತ್ತಡ ಹೇರುವಂತೆ ಆಗ್ರಹಿಸಿ ಬೆಳ್ತಂಗಡಿ ತಹಶೀಲ್ದಾರಾದ ಪೃಥ್ವಿ ಸಾನಿಕಂ ಇವರ ಮೂಲಕ ರಾಜ್ಯಪಾಲರಿಗೆ ಮತ್ತು ಪ್ರಧಾನಿಯವರಿಗೆ ಮನವಿಯನ್ನು ನೀಡಲಾಯಿತು.


ಹಿಂದೂ ಸಮಾಜದ ಅಸ್ತಿತ್ವಕ್ಕೆ ಧಕ್ಕೆ ತರುತ್ತಿರುವ ವಿಚಾರಗಳಲ್ಲಿ ಸರ್ಕಾರಗಳು ವಿಫಲವಾದರೆ ಹಿಂದೂ ಸಮಾಜವು ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯು ಎಚ್ಚರಿಸಿದೆ.

ಈ ಸಂದರ್ಭದಲ್ಲಿ ಧರ್ಮ ಪ್ರೇಮಿಗಳಾದ ಯಶವಂತ ಗೌಡ ಪಂಚಾಯತಿ ಅಧ್ಯಕ್ಷರು ಕೊಯ್ಯೂರು, ಉಮಾ ರಾವ್ ಮಹಿಳಾ ಒಕ್ಕೂಟ ಅಧ್ಯಕ್ಷರು ಬೆಳ್ತಂಗಡಿ, ಕೇಶವ ಅಚ್ಚಿನಡ್ಕ, ರಾಜೇಂದ್ರ ಜಿ ಕಾನರ್ಪ, ಮೋಹನ್ ಬೈರಾ ಪುತ್ರಬೈಲು, ವಸಂತ ಕಲ್ಲಾಜೆ, ಶಾಂತ ಉಜಿರೆ, ಸಂತೋಷ್ ಪನೇಜಾಲ್, ವಿನೋದ ಉಜಿರೆ, ವಸಂತ ಗುರುವಾಯನಕೆರೆ, ಶಾರದಾ ಭಂಡಾರಕರ್, ಯೋಗೀಶ್ ಕೆಂಬರ್ಜೆ, ಯಂ ಹರೀಶ್ ಜಿ ಮುದ್ದಿನಡ್ಕ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya
error: Content is protected !!