23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

ಬೆಳ್ತಂಗಡಿ : ಪರಿಸರ ಮಾಲಿನ್ಯದಿಂದ ಸಮಸ್ಯೆಯಾಗಿದೆ ಎಂದು ಆರೋಪಿಸಿ, ಸಲ್ಲಿಕೆಯಾಗಿರುವ ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟು ನಡ ಮಲೆಯಡ್ಕ ಸಮೀಪದಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಗ್ರೋಡಿ ಹಾಟ್‌ಮಿಕ್ಸ್ ಘಟಕ, ಸರಕಾರದ ಮುಖ್ಯ ಕಾರ್ಯದರ್ಶಿ, ತಹಶೀಲ್ದಾರ್, ಜಿಲ್ಲಾಧಿಕಾರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನಡ ಗ್ರಾ.ಪಂ ಪಿಡಿಒ ಅವರಿಗೆ ನೋಟೀಸು ಜಾರಿ ಮಾಡಿದೆ.


2008 ರಿಂದ ಉಜಿರೆ- ಪಡ್ವೆಟ್ಟು-ಸುರ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಮಿಕ್ಸಿಂಗ್ ಘಟಕದಿಂದ ಪರಿಸರ ಮಾಲಿನ್ಯ ಉಂಟಾಗಿ ಹಲವಾರು ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಮರಾಟಿ ನಾಯ್ಕ ಸಮುದಾಯದ ಪ್ರಮುಖರಾದ ತಿಮ್ಮಯ್ಯ ನಾಯ್ಕ ಮಲೆಯಡ್ಕ, ನಾರಾಯಣ ನಾಯ್ಕ ಮಲೆಯಡ್ಕ, ದಯಾನಂದ ನಾಯ್ಕ ಇಚ್ಚಾವು, ಮುನೀಶ್ ಇಚ್ಚಾವು ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಅಡ್ವೊಕೇಟ್ ಸೋಮಶೇಖರ್ ರಾಜವಂಶಿ ಅರ್ಜಿದಾರರ ಪರವಾಗಿ ಹೈಕೋರ್ಟ್ನಲ್ಲಿ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಾಲಯ ಇದೀಗ ವಿಚಾರಣೆಗಾಗಿ ಮುಗ್ರೋಡಿ ಹಾಟ್‌ಮಿಕ್ಸ್ ಘಟಕ, ಸರಕಾರದ ಮುಖ್ಯ ಕಾರ್ಯದರ್ಶಿ, ತಹಶೀಲ್ದಾರ್, ಜಿಲ್ಲಾಧಿಕಾರಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನಡ ಗ್ರಾ.ಪಂ ಪಿಡಿಒ ಅವರಿಗೆ ನೋಟೀಸು ಜಾರಿ ಮಾಡಿದೆ ಎಂದು ವರದಿಯಾಗಿದೆ.

Related posts

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಮಾಲಾಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರಿಂದ ಕಾರ್ಯಕರ್ತರ ಸಭೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!