25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ನಾಳ: ಇಲ್ಲಿಯ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಗ್ರಾಮಸ್ಥರಿಗೋಸ್ಕರ ಏರ್ಪಡಿಸಿದ ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟವು ನಾಳ ದೇವಸ್ಥಾನದ ಗದ್ದೆಯಲ್ಲಿ ಡಿ.28ರಂದು ಜರುಗಿತು.

ಸತೀಶ್ ದೀಪ ಬೆಳಗಿಸುವುದರ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘಟಕರಾದ ಕಿರಣ್ ರಾವ್, ನಿತಿನ್ , ಸುರೇಶ್ ಪೂಜಾರಿ, ಸುರೇಶ್ ಗೌಡ ಕಲಾಯಿದೊಟ್ಟು ಇನ್ನಿತರರು ಉಪಸ್ಥಿತರಿದ್ದರು.

ಹರೀಶ್ ರಾವ್ ಮಾಲಕತ್ವದ ಸಾಯಿ ರಾಮ್ ಫ್ರೆಂಡ್ಸ್ ನಾಳ, ಸುಧೀರ್ ರವರ ವಿಘ್ನೇಶ್ ಪವರ್, ಗಣೇಶ್ ನಾಳ ರವರ ನೀಲವೇಣಿ, ಪ್ರಣೀತ್ ರವರ ಶ್ರೀ ದುರ್ಗಾ ಫ್ರೆಂಡ್ಸ್, ಪ್ರಸಾದ್ ಮಾಲಕತ್ವದ ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ ತಂಡಗಳು ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನು ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ, ದ್ವಿತೀಯ ಬಹುಮಾನವನ್ನು ಶ್ರೀ ದುರ್ಗಾ ಫ್ರೆಂಡ್ಸ್ ನಾಳ ಪಡೆದುಕೊಂಡಿರುತ್ತದೆ. ಬೆಸ್ಟ್ ಬ್ಯಾಟ್ಸ್ಮನ್ ಆಗಿ ಸನತ್, ಬೆಸ್ಟ್ ಬೌಲರ್ ಆಗಿ ಯೋಗೀಶ್ ಎಸ್ ಆರ್ ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಂದೀಪ್ ನಾಳ ಮುಡಿಗೇರಿಸಿಕೊಂಡಿದ್ದಾರೆ.

Related posts

ಡಿ.25: ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಹಂಸಗಿರಿ ವಠಾರದಲ್ಲಿ ‘ನಂದಿ ನಂದಿನಿ’ ಯಕ್ಷಗಾನ ಪ್ರದರ್ಶನ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya
error: Content is protected !!