25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಸುಲ್ಕೇರಿ: ಬಡಗಕಾರಂದೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವು, ಶಾಲೆಯನ್ನು ದತ್ತು ಸ್ವೀಕರಿಸಿದ ಮತ್ತು ಶ್ರೀ ಸತ್ಯ ದೇವತೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರು ಧ್ವಜಾರೋಹಣವನ್ನು ಮಾಡುವ ಮೂಲಕ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದರು.

ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ ವಾರ್ಷಿಕೋತ್ಸವವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟನೆಗೈದರು. ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ಶಶಿಕಾಂತ್ ನಾಯಕ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮವು ನಡೆಯಿತು.

ಎಂ ಆರ್ ಪಿ ಎಲ್ ಸಂಸ್ಥೆಯಿಂದ ನಿರ್ಮಾಣಗೊಂಡ ಹುಡುಗರ ಶೌಚಾಲಯವನ್ನು ಶಿವಪ್ರಸಾದ ಅಜಿಲರು ಅಳದಂಗಡಿ ಉದ್ಘಾಟನೆಗೈದರು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ವಾರ್ಷಿಕೋತ್ಸವಕ್ಕೆ ಆಗಮಿಸಿ ಈ ವರ್ಷದಲ್ಲಿ ಕೆಪಿಎಸ್ ಶಾಲೆಯನ್ನಾಗಿ ಪರಿವರ್ತಿಸುವ ಭರವಸೆಯನ್ನು ನೀಡಿದರು.

ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಆಚಾರ್ಯ, ಬೆಂಗಳೂರಿನ ಹೈಕೋರ್ಟ್ ನ ವಕೀಲ ಉಮೇಶ್ ಭಂಡಾರಿ, ಶಾಲಾ ನಾಯಕಿ ಕುಮಾರಿ ಸಿಂಚನ, ಶಿರ್ಲಾಲು ಕೃಷಿ ಪತ್ತಿನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಶಾಲಾ ಸುವರ್ಣ ಮಹೋತ್ಸವದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ನೊಚ್ಚ, ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ವಸಂತ ರಾವ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಶಾಲಾ ನಿಕಟಪೂರ್ವ ಎಸ್ ಡಿ ಎಮ್ ಸಿ ಅಧ್ಯಕ್ಷ ಶ್ರೀನಿವಾಸ ರಾವ್ ದೋರಿಂಜ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶಾಲೆಯ ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ರೂಪ , ಮುಖ್ಯ ಶಿಕ್ಷಕ ಸುರೇಶ್ ಎನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸಾದ್ ಪೂಜಾರಿ,
ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಶ್ರೀಮತಿ ನಳಿನಿ, ಕಾರ್ಯದರ್ಶಿ ಹರೀಶ್ ಕುಲಾಲ್, ಸಂಘಟನಾ ಕಾರ್ಯದರ್ಶಿ ಅಭಿಷೇಕ್ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕರು ವರದಿ ವಾಚಿಸಿ, ಶಾಲಾ ಸಹ ಶಿಕ್ಷಕಿ ಶ್ರೀಮತಿ ಮಂಗಳಾ ಕೆ ಕಾರ್ಯಕ್ರಮ ನಿರೂಪಿಸಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸಾದ್ ಪೂಜಾರಿ ಧನ್ಯವಾದವನ್ನಿತ್ತರು.

Related posts

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ದಿ. ಡಾ. ಬಿ. ಯಶೋವರ್ಮ ಜನ್ಮದಿನ ಸ್ಮರಣಾರ್ಥ ಹಲವು ಕಾರ್ಯಕ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!