September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಧಾರ್ಮಿಕ ಸಭೆ

ಓಡಿಲ್ನಾಳ : ಗ್ರಾಮದ ದೇವಸ್ಥಾನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯಾಗುವಲ್ಲಿ ಗ್ರಾಮಸ್ಥರು ಸಹಕಾರ ಅಗತ್ಯವಾಗಿದ್ದು ಮುoದಿನ ದಿನಗಳಲ್ಲಿ ನಮ್ಮ ಮಕ್ಕಳಿಗೆ ಧಾರ್ಮಿಕತೆಯ ವಿಚಾರವನ್ನು ತಿಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎoದು ಕುವೆಟ್ಟು ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ಅವರು ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ ಪ್ರಯುಕ್ತ ನಡೆದ ಧಾರ್ಮಿಕ ಸಭೆ ಹೇಳಿದರು .

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಸoತಿ ಬಿ ಶೆಟ್ಟಿ‌ ಮುoಬೈ, ಸುಜಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ದುಗ್ಗಪ್ಪ ಪೊಕ್ಕಿ, ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು. ಮಹೀಳಾ ಸಮಿತಿ ಅಧ್ಯಕ್ಷೆ ಭಾರತಿ ಎಸ್ ಅಡ್ಡ ಕೊಡoಗೆ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದಾನಿಗಳಾದ ವಸoತಿ ಡಿ ಶೆಟ್ಟಿ ಮುoಬೈ ಇವರನ್ನು ಗೌರವಿಸಲಾಯಿತು. ಸುದೀಪ್ ಶೆಟ್ಟಿ ಸ್ವಾಗತಿಸಿ, ಚಿನ್ನಯ ಮೂಲ್ಯ ಪರಾರಿ ಕಾರ್ಯಕ್ರಮ ನಿರೂಪಿಸಿದರು. ವಿಮಾಲಾಕ್ಷ ಗೌಡ ಪಡ್ಪು ಧನ್ಯವಾದ ನೀಡಿದರು. ದೇವಸ್ಥಾನದಲ್ಲಿ ದೇವರ ಬಲಿ ಉತ್ಸವ ಮಹಾಪೂಜೆ. ಪ್ರಸಾದ ವಿತರಣೆ ಅನ್ನಸoತರ್ಪನೆ ಜರಗಿತು.

Related posts

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

Suddi Udaya

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

Suddi Udaya

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

Suddi Udaya
error: Content is protected !!