23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

ನಾಳ: ಇಲ್ಲಿಯ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಗ್ರಾಮಸ್ಥರಿಗೋಸ್ಕರ ಏರ್ಪಡಿಸಿದ ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟವು ನಾಳ ದೇವಸ್ಥಾನದ ಗದ್ದೆಯಲ್ಲಿ ಡಿ.28ರಂದು ಜರುಗಿತು.

ಸತೀಶ್ ದೀಪ ಬೆಳಗಿಸುವುದರ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘಟಕರಾದ ಕಿರಣ್ ರಾವ್, ನಿತಿನ್ , ಸುರೇಶ್ ಪೂಜಾರಿ, ಸುರೇಶ್ ಗೌಡ ಕಲಾಯಿದೊಟ್ಟು ಇನ್ನಿತರರು ಉಪಸ್ಥಿತರಿದ್ದರು.

ಹರೀಶ್ ರಾವ್ ಮಾಲಕತ್ವದ ಸಾಯಿ ರಾಮ್ ಫ್ರೆಂಡ್ಸ್ ನಾಳ, ಸುಧೀರ್ ರವರ ವಿಘ್ನೇಶ್ ಪವರ್, ಗಣೇಶ್ ನಾಳ ರವರ ನೀಲವೇಣಿ, ಪ್ರಣೀತ್ ರವರ ಶ್ರೀ ದುರ್ಗಾ ಫ್ರೆಂಡ್ಸ್, ಪ್ರಸಾದ್ ಮಾಲಕತ್ವದ ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ ತಂಡಗಳು ಭಾಗವಹಿಸಿದ್ದು, ಪ್ರಥಮ ಬಹುಮಾನವನ್ನು ಶ್ರೀ ರಾಮ್ ಫ್ರೆಂಡ್ಸ್ ಗೇರುಕಟ್ಟೆ, ದ್ವಿತೀಯ ಬಹುಮಾನವನ್ನು ಶ್ರೀ ದುರ್ಗಾ ಫ್ರೆಂಡ್ಸ್ ನಾಳ ಪಡೆದುಕೊಂಡಿರುತ್ತದೆ. ಬೆಸ್ಟ್ ಬ್ಯಾಟ್ಸ್ಮನ್ ಆಗಿ ಸನತ್, ಬೆಸ್ಟ್ ಬೌಲರ್ ಆಗಿ ಯೋಗೀಶ್ ಎಸ್ ಆರ್ ಹಾಗೂ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಂದೀಪ್ ನಾಳ ಮುಡಿಗೇರಿಸಿಕೊಂಡಿದ್ದಾರೆ.

Related posts

ಕೊಕ್ಕಡ: ಡಾ.ಬಿ ಮೋಹನ್ ದಾಸ್ ಗೌಡ ರವರ 90ನೇ ವರ್ಷದ ನವತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

Suddi Udaya

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

Suddi Udaya
error: Content is protected !!