25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಡಿ.29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನ ಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಡಿ. ಅಬ್ದುಲ್ ರೆಹಮಾನ್ ಮಾತನಾಡಿ ಇಂದಿನ ಮಕ್ಕಳೇ ಮುಂದಿನ ಜನಾಂಗ, ದೇಶದ ಭವಿಷ್ಯ ಕಟ್ಟುವ ರೂವಾರಿಗಳು ವಿದ್ಯಾರ್ಥಿಗಳು ಹಾಗಾಗಿ ತಮ್ಮ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞೆಯನ್ನು ಬೋಧಿಸಿದರು. ವೇದಿಕೆಯಲ್ಲಿ ಯೋಜನೆಯ ಬೆಳಾಲು ವಲಯದ ಒಕ್ಕೂಟದ ಅಧ್ಯಕ್ಷ ರತ್ನಾಕರ ಆಚಾರ್ಯ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಗಳಾದ ತಾರಾನಾಥ್, ಚೈತನ್ಯ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಪ್ರಮೀಳಾ ಸ್ವಾಗತಿಸಿ, ಶಿಕ್ಷಕ ಕಿರಣ್ ವಂದಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಜಿರೆ ವಲಯ ಮೇಲ್ವಿಚಾರಕರಾದ ಪೂರ್ಣಿಮಾ ಕಾರ್ಯಕ್ರಮ ನಿರ್ವಹಿಸಿದರು.

Related posts

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕಳೆಂಜ ಗ್ರಾ. ಪಂ. ನಲ್ಲಿ ಪ್ರತಿಭಟನೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya
error: Content is protected !!